ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಸದ್ಯ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ಒಂದು ವಾರದೊಳಗಾಗಿ ಘನ ವಾಹನ ಸಂಚಾರಕ್ಕೂ ಅವಕಾಶ ನೀಡುವ ಪ್ರಯತ್ನ ಮುಂದುರಿದಿದೆ.
ಸಕಲೇಶಪುರ ತಾಲೂಕಿನ ದೋಣಿಗಾಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ಇದೀಗ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್, ಸಾರಿಗೆ ಸಂಸ್ಥೆಯ ಬಸ್, ರಾಜಹಂಸ, ಐರಾವತ ಬಸ್ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ ಸಂಚರಿಸಬಹುದು. ಅಂಬುಲೆನ್ಸ್, ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸದ್ಯದಲ್ಲೇ ಬದಲಿ ಮಾರ್ಗದ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು . ಬದಲಿ ರಸ್ತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ 2.2 ಕಿಲೋಮೀಟರ್ ಹೊಸ ರಸ್ತೆ ಮಾಡಲು 4.3 ಕೋಟಿ ಹಣವನ್ನು ಮಂಜೂರು ಮಾಡಲಾಗಿದ್ದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…