Advertisement
ಸಾಹಿತ್ಯ

ಪರಮೇಶ್ವರ ಭಟ್ಟ ಬಾಳಿಲ ಪ್ರಶಸ್ತಿಗೆ ನಾರಾಯಣ ಕೃಷ್ಣ ಶಾನುಭಾಗ ಆಯ್ಕೆ

Share

ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಗೆ ಶ್ರಮಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು (ರಿ) ವಾರ್ಷಿಕವಾಗಿ ನೀಡುವ ಪರಮೇಶ್ವರ ಭಟ್ಟ ಬಾಳಿಲ ಪ್ರಶಸ್ತಿಗೆ ಈ ಬಾರಿ (2021–22) ಉತ್ತರ ಕನ್ನಡದ ಕುಮಟಾದ ಸಾಹಿತಿ ನಾರಾಯಣ ಕೃಷ್ಣ ಶಾನುಭಾಗ ಅವರು ಆಯ್ಕೆಯಾಗಿದ್ದಾರೆ.

ಹವ್ಯಕ ಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿರುವವರನ್ನುಗುರುತಿಸಿ, ಸಾಹಿತಿ ಪರಮೇಶ್ವರ ಭಟ್ಟ ಬಾಳಿಲ ಅವರ ಹೆಸರಿನಲ್ಲಿ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 5000 ನಗದು, ಫಲಕ, ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಶಸ್ತಿ ಪುರಸ್ಕೃತರ ಪರಿಚಯ: ಕುಮಟಾ ತಾಲ್ಲೂಕಿನ ವಾಲಗಳ್ಳಿಯಲ್ಲಿ ನಾರಾಯಣಕೃಷ್ಣ ಶಾನುಭಾಗರು ಕೃಷ್ಣ ಶಾನುಭೋಗ ಹಾಗೂ ಮಹಾದೇವಿದಂಪತಿಯ ಮೊದಲ ಮಗ.
ಕೃಷಿಕ ಕುಟುಂಬದಿಂದ ಬಂದವರಾದ ಶಾನುಭೋಗರು ಪ್ರಾಥಮಿಕ ಶಿಕ್ಷಣವನ್ನು ವಾಲಗಳ್ಳಿ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಕೂಜಳ್ಳಿಯಲ್ಲಿ ಪಡೆದರು. ಕಾರವಾರದ ಸರಕಾರಿ ಪಾಲಿಟೆಕ್ ಕಾಲೇಜಿನಲ್ಲಿ ಸಿವಿಲ್ಇಂ ಜಿನಿಯರಿಂಗ್ನಲ್ಲಿ ಡಿಪ್ಲೊಮಾ, ಅದೇ ಕಾಲೇಜು, ಬೆಳಗಾವಿ ಪಾಲಿಟೆಕ್ನಿಕ್ನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಎಎಂಐಐ ಇಂಜಿನಿಯರಿಂಗ್ ಪದವಿ.  1973ರಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ ಇಂಜಿನಿಯರ್ ಆಗಿ ಸೇವೆ ಆರಂಭಿಸಿ ಕಾರ್ಯಪಾಲಕ ಇಂಜಿನಿರ್‌ ಆಗಿ ಮುಂದೆ 2001 ರಲ್ಲಿ ನಿವೃತ್ತಿಯಾದರು.
ಹವ್ಯಕ ಮಹಾಸಭೆಯ ಹವ್ಯಕ ಅಧ್ಯಯನ ಕೇಂದ್ರದ ಸ್ಥಾಪಕ ಪ್ರಧಾನ ನಿರ್ದೇಶಕರಾಗಿ 10 ವರ್ಷಗಳ ಕಾಲ ಸೇವೆಸಲ್ಲಿಸಿರುವ ನಾರಾಯಣ ಕೃಷ್ಣ ಶಾನುಭಾಗರು, 22 ಪುಸ್ತಕಗಳು ಪ್ರಕಟಣೆಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

15 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

17 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

20 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago