Advertisement
ಸಾಹಿತ್ಯ

ಪರಮೇಶ್ವರ ಭಟ್ಟ ಬಾಳಿಲ ಪ್ರಶಸ್ತಿಗೆ ನಾರಾಯಣ ಕೃಷ್ಣ ಶಾನುಭಾಗ ಆಯ್ಕೆ

Share

ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಗೆ ಶ್ರಮಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು (ರಿ) ವಾರ್ಷಿಕವಾಗಿ ನೀಡುವ ಪರಮೇಶ್ವರ ಭಟ್ಟ ಬಾಳಿಲ ಪ್ರಶಸ್ತಿಗೆ ಈ ಬಾರಿ (2021–22) ಉತ್ತರ ಕನ್ನಡದ ಕುಮಟಾದ ಸಾಹಿತಿ ನಾರಾಯಣ ಕೃಷ್ಣ ಶಾನುಭಾಗ ಅವರು ಆಯ್ಕೆಯಾಗಿದ್ದಾರೆ.

ಹವ್ಯಕ ಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿರುವವರನ್ನುಗುರುತಿಸಿ, ಸಾಹಿತಿ ಪರಮೇಶ್ವರ ಭಟ್ಟ ಬಾಳಿಲ ಅವರ ಹೆಸರಿನಲ್ಲಿ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 5000 ನಗದು, ಫಲಕ, ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಪ್ರಶಸ್ತಿ ಪುರಸ್ಕೃತರ ಪರಿಚಯ: ಕುಮಟಾ ತಾಲ್ಲೂಕಿನ ವಾಲಗಳ್ಳಿಯಲ್ಲಿ ನಾರಾಯಣಕೃಷ್ಣ ಶಾನುಭಾಗರು ಕೃಷ್ಣ ಶಾನುಭೋಗ ಹಾಗೂ ಮಹಾದೇವಿದಂಪತಿಯ ಮೊದಲ ಮಗ.
ಕೃಷಿಕ ಕುಟುಂಬದಿಂದ ಬಂದವರಾದ ಶಾನುಭೋಗರು ಪ್ರಾಥಮಿಕ ಶಿಕ್ಷಣವನ್ನು ವಾಲಗಳ್ಳಿ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಕೂಜಳ್ಳಿಯಲ್ಲಿ ಪಡೆದರು. ಕಾರವಾರದ ಸರಕಾರಿ ಪಾಲಿಟೆಕ್ ಕಾಲೇಜಿನಲ್ಲಿ ಸಿವಿಲ್ಇಂ ಜಿನಿಯರಿಂಗ್ನಲ್ಲಿ ಡಿಪ್ಲೊಮಾ, ಅದೇ ಕಾಲೇಜು, ಬೆಳಗಾವಿ ಪಾಲಿಟೆಕ್ನಿಕ್ನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಎಎಂಐಐ ಇಂಜಿನಿಯರಿಂಗ್ ಪದವಿ.  1973ರಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ ಇಂಜಿನಿಯರ್ ಆಗಿ ಸೇವೆ ಆರಂಭಿಸಿ ಕಾರ್ಯಪಾಲಕ ಇಂಜಿನಿರ್‌ ಆಗಿ ಮುಂದೆ 2001 ರಲ್ಲಿ ನಿವೃತ್ತಿಯಾದರು.
ಹವ್ಯಕ ಮಹಾಸಭೆಯ ಹವ್ಯಕ ಅಧ್ಯಯನ ಕೇಂದ್ರದ ಸ್ಥಾಪಕ ಪ್ರಧಾನ ನಿರ್ದೇಶಕರಾಗಿ 10 ವರ್ಷಗಳ ಕಾಲ ಸೇವೆಸಲ್ಲಿಸಿರುವ ನಾರಾಯಣ ಕೃಷ್ಣ ಶಾನುಭಾಗರು, 22 ಪುಸ್ತಕಗಳು ಪ್ರಕಟಣೆಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

4 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

10 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

21 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago