Advertisement
ಸಾಹಿತ್ಯ

ಪರಮೇಶ್ವರ ಭಟ್ಟ ಬಾಳಿಲ ಪ್ರಶಸ್ತಿಗೆ ನಾರಾಯಣ ಕೃಷ್ಣ ಶಾನುಭಾಗ ಆಯ್ಕೆ

Share

ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಗೆ ಶ್ರಮಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು (ರಿ) ವಾರ್ಷಿಕವಾಗಿ ನೀಡುವ ಪರಮೇಶ್ವರ ಭಟ್ಟ ಬಾಳಿಲ ಪ್ರಶಸ್ತಿಗೆ ಈ ಬಾರಿ (2021–22) ಉತ್ತರ ಕನ್ನಡದ ಕುಮಟಾದ ಸಾಹಿತಿ ನಾರಾಯಣ ಕೃಷ್ಣ ಶಾನುಭಾಗ ಅವರು ಆಯ್ಕೆಯಾಗಿದ್ದಾರೆ.

ಹವ್ಯಕ ಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿರುವವರನ್ನುಗುರುತಿಸಿ, ಸಾಹಿತಿ ಪರಮೇಶ್ವರ ಭಟ್ಟ ಬಾಳಿಲ ಅವರ ಹೆಸರಿನಲ್ಲಿ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 5000 ನಗದು, ಫಲಕ, ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement

ಪ್ರಶಸ್ತಿ ಪುರಸ್ಕೃತರ ಪರಿಚಯ: ಕುಮಟಾ ತಾಲ್ಲೂಕಿನ ವಾಲಗಳ್ಳಿಯಲ್ಲಿ ನಾರಾಯಣಕೃಷ್ಣ ಶಾನುಭಾಗರು ಕೃಷ್ಣ ಶಾನುಭೋಗ ಹಾಗೂ ಮಹಾದೇವಿದಂಪತಿಯ ಮೊದಲ ಮಗ.
ಕೃಷಿಕ ಕುಟುಂಬದಿಂದ ಬಂದವರಾದ ಶಾನುಭೋಗರು ಪ್ರಾಥಮಿಕ ಶಿಕ್ಷಣವನ್ನು ವಾಲಗಳ್ಳಿ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಕೂಜಳ್ಳಿಯಲ್ಲಿ ಪಡೆದರು. ಕಾರವಾರದ ಸರಕಾರಿ ಪಾಲಿಟೆಕ್ ಕಾಲೇಜಿನಲ್ಲಿ ಸಿವಿಲ್ಇಂ ಜಿನಿಯರಿಂಗ್ನಲ್ಲಿ ಡಿಪ್ಲೊಮಾ, ಅದೇ ಕಾಲೇಜು, ಬೆಳಗಾವಿ ಪಾಲಿಟೆಕ್ನಿಕ್ನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಎಎಂಐಐ ಇಂಜಿನಿಯರಿಂಗ್ ಪದವಿ.  1973ರಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ ಇಂಜಿನಿಯರ್ ಆಗಿ ಸೇವೆ ಆರಂಭಿಸಿ ಕಾರ್ಯಪಾಲಕ ಇಂಜಿನಿರ್‌ ಆಗಿ ಮುಂದೆ 2001 ರಲ್ಲಿ ನಿವೃತ್ತಿಯಾದರು.
ಹವ್ಯಕ ಮಹಾಸಭೆಯ ಹವ್ಯಕ ಅಧ್ಯಯನ ಕೇಂದ್ರದ ಸ್ಥಾಪಕ ಪ್ರಧಾನ ನಿರ್ದೇಶಕರಾಗಿ 10 ವರ್ಷಗಳ ಕಾಲ ಸೇವೆಸಲ್ಲಿಸಿರುವ ನಾರಾಯಣ ಕೃಷ್ಣ ಶಾನುಭಾಗರು, 22 ಪುಸ್ತಕಗಳು ಪ್ರಕಟಣೆಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

11 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

13 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

19 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 day ago