ಈ ಅಕ್ಕಿ ಊರೆಲ್ಲ ಪರಿಮಳ ಸೂಸುತ್ತೆ : ಯಾವ ಸುಗಂಧ ದ್ರವ್ಯಕ್ಕೂ ಕಡಿಮೆಯಿಲ್ಲ

March 30, 2023
7:52 PM

ಸಣ್ಣ ಸಣ್ಣದಾಗಿರೋ ಈ ಅಕ್ಕಿಯನ್ನು ಒಂದು ಹಿಡಿ ಕೈಲಿ ಹಿಡಿದ್ರೆ ಮನೆಯೆಲ್ಲಾ ಘಮ್ ಅನ್ನುತ್ತೆ. ಇನ್ನು ಬೇಯಿಸಿದ್ರೆ ಇಡೀ ಊರಿಗೇ ಪರಿಮಳ ಬೀರುತ್ತೆ. ಯಾಕೆಂದ್ರೆ ಈ ಅಕ್ಕಿ ಹೆಸರೇ ಪರಿಮಳ ಸಣ್ಣಕ್ಕಿ ಅಂತಾ. ಯೆಸ್, ಉತ್ತರ ಕನ್ನಡದ ಶಿರಸಿಯ ಮಂಜುಗುಣಿಯಲ್ಲಿ ಕಾಣಸಿಗೋ ಪರಿಮಳ ಸಣ್ಣಕ್ಕಿ ಅಪರೂಪದಲ್ಲಿ ಅಪರೂಪದ ಅಕ್ಕಿ. ಇದಕ್ಕೆ ಯಾವ ಕೆಮಿಕಲನ್ನೂ ಹಾಕಲ್ಲ, ಪರ್ಫ್ಯೂಮ್ ಸ್ಪ್ರೇನೂ ಮಾಡಲ್ಲ, ಆದ್ರೂ ಇದೊಂಥರ ಪರಿಮಳ ಸೂಸುವ ಅಕ್ಕಿ.

Advertisement
Advertisement
Advertisement
Advertisement

ಅಪರೂಪದ ತಳಿ
ಭಾರತದಲ್ಲಿ ಇಂತಹ ಭತ್ತ ಕಂಡು ಬರೋದು ಎರಡು ಕಡೆಗಳಲ್ಲಿ ಮಾತ್ರ ಅಂತಾರೆ ಇಲ್ಲಿನ ಸ್ಥಳೀಯರು. ಅದ್ರಲ್ಲಿ ಒಂದು ಪರಿಮಳ ಭರಿತ ಆಂಧ್ರದ ಆಮ್ಮದಾನಿಯಲ್ಲಿ, ಇನ್ನೊಂದು ಕರ್ನಾಟಕದ ಈ ಮಂಜುಗುಣಿಯಂತೆ.

Advertisement

ಫಸಲು ಕಡಿಮೆ
ವಿಶೇಷ ಅಂದ್ರೆ, ಮಾಮೂಲಿ ಅಕ್ಕಿ ಎಕರೆಗೆ ಒಂದು ಇಪ್ಪತ್ತೈದು ಮೂಟೆಯಾದರೂ ಇರುತ್ತದೆ. ಆದರೆ ಈ ಅಕ್ಕಿ ಬರೋದು 8 ರಿಂದ 12 ಮೂಟೆ ಮಾತ್ರ! ಹುಟ್ಟುತ್ತಲೇ ಪರಿಮಳ ಇಟ್ಕೊಂಡ ಇದಕ್ಕೆ ಭತ್ತವಾದಾಗ ಪರಿಮಳ ಇರಲ್ಲ. ಮತ್ತೆ ಭತ್ತ ಬಿರಿದು ಅಕ್ಕಿಯಾದಾಗ ಮಿಲ್ ತುಂಬಾ ಪರಿಮಳವೋ ಪರಿಮಳ. ಇನ್ನು ಮನೆಯಲ್ಲಿ ಸ್ಟವ್ ನಲ್ಲಿ ಬೇಯೋಕೆ ಇಟ್ರಂತೂ ನೀವ್ ಪರಿಮಳ ಸಣ್ಣಕ್ಕಿ ಅಡುಗೆಗೆ ಬಳಸ್ತಿದ್ದೀರ ಅಂತಾ ಪಕ್ಕಾ ಹೇಳ್ಬಹುದು. ಅಷ್ಟೊಂದು ಸುವಾಸನೆ ಮನೆ ತುಂಬಾ ಹರಡುತ್ತೆ.

ಯಾಕೆ ಬಳಸುತ್ತಾರೆ?
ಇದು ಈಗ ಅಳಿವಿನಂಚಿನಲ್ಲಿರುವ ಅಕ್ಕಿ, ಮಂಜುಗುಣಿಯ ರೇತಿ ಮಿಶ್ರಿತ ಮಣ್ಣಿಗೆ ಮಾತ್ರ ಸರಿ ಹೊಂದುವ ಈ ಭತ್ತದ ತಳಿ. ಇದರ ಬೆಳೆಯು ಗಿಡ್ಡವಾಗಿ ಧಾನ್ಯಗಳು ದೂರ ದೂರಕ್ಕೆ ಇರುತ್ತವೆ. ಇದನ್ನು ಹೆಚ್ಚಾಗಿ ಕ್ಷೀರಾನ್ನ,ಕೇಸರಿಬಾತ್ ಹಾಗೂ ಮಸಾಲೆ ಅನ್ನ ತಯಾರಿಸಲು ಮಾತ್ರ ಬಳಸುತ್ತಾರೆ.

Advertisement

ದರ ಹೀಗಿದೆ
ಶಿರಸಿ, ಕುಮಟಾ ಜನರಿಗೆ ಮಂಜುಗುಣಿ ಅಕ್ಕಿ ಅಚ್ಚುಮೆಚ್ಚು. ಕೆಜಿಗೆ 75-78ರೂಪಾಯಿ ಈಗಿನ ದರ. ಭವಿಷ್ಯದಲ್ಲಿ ಇನ್ನೂ ಹೆಚ್ಚಾಗಬಹುದು. ಇನ್ನು ಉತ್ತರ ಕನ್ನಡದ ಮುಂಡಗೋಡಿನ ಮಣ್ಣಿಗೂ ಈ ತಳಿ ಒಗ್ಗಬಹುದು ಎನ್ನೋದು ರೈತರ ಅಂಬೋಣ. ಇನ್ನು ಇದರ ಪರಿಮಳದ ಗುಟ್ಟು ಅರಿಯಲು, ಅದೆಷ್ಟೋ ಮಂದಿ ಸಂಶೋಧಕರು ಈ ಬೆಳೆಯ ಬಗ್ಗೆ ಅಧ್ಯಯನ ನಡೆಸಿದ್ದೂ ಇದೆ.

Advertisement

ಒಟ್ಟಿನಲ್ಲಿ ಪರಿಮಳ ಸಣ್ಣಕ್ಕಿ ಭಾರೀ ಪರಿಮಳ ಬೀರುವ ಅಕ್ಕಿಯಾದ್ರೂ, ಫಸಲು ನೀಡೋದಲ್ಲಿ ಚೌಕಾಸಿ ತೋರುತ್ತೆ. ಆದ್ರೆ ಊರಿಗೆಲ್ಲ ಸುವಾಸನೆಯ ಕಂಪು ಬೀರುವ ಈ ಅಕ್ಕಿಯ ಟೇಸ್ಟಿ ನೋಡುವ ಭಾಗ್ಯ ಸದ್ಯಕ್ಕಂತೂ ಕೆಲವೇ ಕೆಲವು ಮಂದಿಗಷ್ಟೇ ಲಭಿಸಿದೆ ಅನ್ನೋದೇ ವಿಶೇಷ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror