ಸುದ್ದಿಗಳು

ಈ ಅಕ್ಕಿ ಊರೆಲ್ಲ ಪರಿಮಳ ಸೂಸುತ್ತೆ : ಯಾವ ಸುಗಂಧ ದ್ರವ್ಯಕ್ಕೂ ಕಡಿಮೆಯಿಲ್ಲ

Share

ಸಣ್ಣ ಸಣ್ಣದಾಗಿರೋ ಈ ಅಕ್ಕಿಯನ್ನು ಒಂದು ಹಿಡಿ ಕೈಲಿ ಹಿಡಿದ್ರೆ ಮನೆಯೆಲ್ಲಾ ಘಮ್ ಅನ್ನುತ್ತೆ. ಇನ್ನು ಬೇಯಿಸಿದ್ರೆ ಇಡೀ ಊರಿಗೇ ಪರಿಮಳ ಬೀರುತ್ತೆ. ಯಾಕೆಂದ್ರೆ ಈ ಅಕ್ಕಿ ಹೆಸರೇ ಪರಿಮಳ ಸಣ್ಣಕ್ಕಿ ಅಂತಾ. ಯೆಸ್, ಉತ್ತರ ಕನ್ನಡದ ಶಿರಸಿಯ ಮಂಜುಗುಣಿಯಲ್ಲಿ ಕಾಣಸಿಗೋ ಪರಿಮಳ ಸಣ್ಣಕ್ಕಿ ಅಪರೂಪದಲ್ಲಿ ಅಪರೂಪದ ಅಕ್ಕಿ. ಇದಕ್ಕೆ ಯಾವ ಕೆಮಿಕಲನ್ನೂ ಹಾಕಲ್ಲ, ಪರ್ಫ್ಯೂಮ್ ಸ್ಪ್ರೇನೂ ಮಾಡಲ್ಲ, ಆದ್ರೂ ಇದೊಂಥರ ಪರಿಮಳ ಸೂಸುವ ಅಕ್ಕಿ.

ಅಪರೂಪದ ತಳಿ
ಭಾರತದಲ್ಲಿ ಇಂತಹ ಭತ್ತ ಕಂಡು ಬರೋದು ಎರಡು ಕಡೆಗಳಲ್ಲಿ ಮಾತ್ರ ಅಂತಾರೆ ಇಲ್ಲಿನ ಸ್ಥಳೀಯರು. ಅದ್ರಲ್ಲಿ ಒಂದು ಪರಿಮಳ ಭರಿತ ಆಂಧ್ರದ ಆಮ್ಮದಾನಿಯಲ್ಲಿ, ಇನ್ನೊಂದು ಕರ್ನಾಟಕದ ಈ ಮಂಜುಗುಣಿಯಂತೆ.

ಫಸಲು ಕಡಿಮೆ
ವಿಶೇಷ ಅಂದ್ರೆ, ಮಾಮೂಲಿ ಅಕ್ಕಿ ಎಕರೆಗೆ ಒಂದು ಇಪ್ಪತ್ತೈದು ಮೂಟೆಯಾದರೂ ಇರುತ್ತದೆ. ಆದರೆ ಈ ಅಕ್ಕಿ ಬರೋದು 8 ರಿಂದ 12 ಮೂಟೆ ಮಾತ್ರ! ಹುಟ್ಟುತ್ತಲೇ ಪರಿಮಳ ಇಟ್ಕೊಂಡ ಇದಕ್ಕೆ ಭತ್ತವಾದಾಗ ಪರಿಮಳ ಇರಲ್ಲ. ಮತ್ತೆ ಭತ್ತ ಬಿರಿದು ಅಕ್ಕಿಯಾದಾಗ ಮಿಲ್ ತುಂಬಾ ಪರಿಮಳವೋ ಪರಿಮಳ. ಇನ್ನು ಮನೆಯಲ್ಲಿ ಸ್ಟವ್ ನಲ್ಲಿ ಬೇಯೋಕೆ ಇಟ್ರಂತೂ ನೀವ್ ಪರಿಮಳ ಸಣ್ಣಕ್ಕಿ ಅಡುಗೆಗೆ ಬಳಸ್ತಿದ್ದೀರ ಅಂತಾ ಪಕ್ಕಾ ಹೇಳ್ಬಹುದು. ಅಷ್ಟೊಂದು ಸುವಾಸನೆ ಮನೆ ತುಂಬಾ ಹರಡುತ್ತೆ.

ಯಾಕೆ ಬಳಸುತ್ತಾರೆ?
ಇದು ಈಗ ಅಳಿವಿನಂಚಿನಲ್ಲಿರುವ ಅಕ್ಕಿ, ಮಂಜುಗುಣಿಯ ರೇತಿ ಮಿಶ್ರಿತ ಮಣ್ಣಿಗೆ ಮಾತ್ರ ಸರಿ ಹೊಂದುವ ಈ ಭತ್ತದ ತಳಿ. ಇದರ ಬೆಳೆಯು ಗಿಡ್ಡವಾಗಿ ಧಾನ್ಯಗಳು ದೂರ ದೂರಕ್ಕೆ ಇರುತ್ತವೆ. ಇದನ್ನು ಹೆಚ್ಚಾಗಿ ಕ್ಷೀರಾನ್ನ,ಕೇಸರಿಬಾತ್ ಹಾಗೂ ಮಸಾಲೆ ಅನ್ನ ತಯಾರಿಸಲು ಮಾತ್ರ ಬಳಸುತ್ತಾರೆ.

ದರ ಹೀಗಿದೆ
ಶಿರಸಿ, ಕುಮಟಾ ಜನರಿಗೆ ಮಂಜುಗುಣಿ ಅಕ್ಕಿ ಅಚ್ಚುಮೆಚ್ಚು. ಕೆಜಿಗೆ 75-78ರೂಪಾಯಿ ಈಗಿನ ದರ. ಭವಿಷ್ಯದಲ್ಲಿ ಇನ್ನೂ ಹೆಚ್ಚಾಗಬಹುದು. ಇನ್ನು ಉತ್ತರ ಕನ್ನಡದ ಮುಂಡಗೋಡಿನ ಮಣ್ಣಿಗೂ ಈ ತಳಿ ಒಗ್ಗಬಹುದು ಎನ್ನೋದು ರೈತರ ಅಂಬೋಣ. ಇನ್ನು ಇದರ ಪರಿಮಳದ ಗುಟ್ಟು ಅರಿಯಲು, ಅದೆಷ್ಟೋ ಮಂದಿ ಸಂಶೋಧಕರು ಈ ಬೆಳೆಯ ಬಗ್ಗೆ ಅಧ್ಯಯನ ನಡೆಸಿದ್ದೂ ಇದೆ.

ಒಟ್ಟಿನಲ್ಲಿ ಪರಿಮಳ ಸಣ್ಣಕ್ಕಿ ಭಾರೀ ಪರಿಮಳ ಬೀರುವ ಅಕ್ಕಿಯಾದ್ರೂ, ಫಸಲು ನೀಡೋದಲ್ಲಿ ಚೌಕಾಸಿ ತೋರುತ್ತೆ. ಆದ್ರೆ ಊರಿಗೆಲ್ಲ ಸುವಾಸನೆಯ ಕಂಪು ಬೀರುವ ಈ ಅಕ್ಕಿಯ ಟೇಸ್ಟಿ ನೋಡುವ ಭಾಗ್ಯ ಸದ್ಯಕ್ಕಂತೂ ಕೆಲವೇ ಕೆಲವು ಮಂದಿಗಷ್ಟೇ ಲಭಿಸಿದೆ ಅನ್ನೋದೇ ವಿಶೇಷ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

14 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

14 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

14 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

15 hours ago

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…

15 hours ago

ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

15 hours ago