Advertisement
ಸುದ್ದಿಗಳು

ಮೆಕ್ಕೆಜೋಳ ಬೆಳೆಗೆ ಗಿಳಿಗಳ ಕಾಟ | ಬೆಳೆ ರಕ್ಷಿಸಿಕೊಳ್ಳಲು ರೈತರ ವಿನೂತನ ಪ್ರಯೋಗಗಳು

Share

ರಾಜ್ಯದಲ್ಲಿ ದಾವಣಗೆರೆಯು ಮೆಕ್ಕೆಜೋಳವನ್ನು ಅತಿಹೆಚ್ಚಾಗಿ ಬೆಳೆಯುವ ಜಿಲ್ಲೆಗಳಲ್ಲೊಂದಾಗಿದೆ. ಚಳಿಗಾಲದಲ್ಲಿಬಹಳಷ್ಟು ಉಪಯೋಗವಾಗುವ ಮೆಕ್ಕೆಜೋಳವು ಹೊರ ರಾಜ್ಯಗಳಿಗೂ ರಫ್ತಾಗುತ್ತದೆ. ಈಗಾಗಲೇ, ಈ ಜೋಳಕ್ಕೆ ಲದ್ದಿ ಹುಳು, ಹಂದಿಗಳು, ಮುಳ್ಳು ಸಜ್ಜೆ ಕಾಟ ಇತ್ತು. ಇದೀಗ ರೈತ ಬೆಳೆದ ಪಾಪ್​ಕಾರ್ನ್ ಮೆಕ್ಕೆಜೋಳಕ್ಕೆ ಗಿಳಿಗಳ ಕಾಟ ಶುರುವಾಗಿದೆ. ರೈತರು ತಮ್ಮ ಬೆಳೆ ಉಳಿಸಿಕೊಳ್ಳಲು ಹಗಲು-ರಾತ್ರಿ ಎನ್ನದೆ ಹರಸಾಹಸ ಪಡುತ್ತಿದ್ದಾರೆ.

ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಪಾಪ್​​ಕಾರ್ನ್ ತಯಾರಿಸುವ ಮೆಕ್ಕೆಜೋಳಕ್ಕೆ ಹೆಸರುವಾಸಿಯಾಗಿದೆ. ಸಂತೇಬೆನ್ನೂರು ಸುತ್ತಮುತ್ತಲಿನ ಹಳ್ಳಿಗಳಲ್ಲಿ 3,500 ಹೆಕ್ಟೇರ್ ಪ್ರದೇಶದಲ್ಲಿ ಇದನ್ನು ಬೆಳೆಯಲಾಗುತ್ತದೆ. ಸಂತೇಬೆನ್ನೂರಿನ ಮಾವಿನ ಬೆಳೆಯಂತೆ, ಈ ಪಾಪ್​​ಕಾರ್ನ್ ಮೆಕ್ಕೆಜೋಳ ಕೂಡ ಪ್ರಸಿದ್ಧಿ ಪಡೆದಿದೆ. ಉತ್ತರ ಭಾರತದಲ್ಲಿ ಚಳಿಗಾಲದಲ್ಲಿ ಮೆಕ್ಕೆಜೋಳವನ್ನು ಹರಳು ಮಾಡಿ, ನಂತರ ಪಾಪ್​ಕಾರ್ನ್ ಮಾಡುವ ಮೂಲಕ ಸಿನಿಮಾ ಟಾಕೀಸ್, ಮಾಲ್ ಹಾಗೂ ಅಂಗಡಿಗಳಲ್ಲಿ ಹೆಚ್ಚಾಗಿ ಮಾರಾಟ ಮಾಡಲಾಗುತ್ತದೆ. ಶೀತ ಅತಿಯಾಗಿರುವ ಜಾರ್ಖಂಡ್​​, ಬಿಹಾರ​, ಮಧ್ಯಪ್ರದೇಶ, ಉತ್ತರಪ್ರದೇಶ, ದೆಹಲಿಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. ರೈತರು ಗಿಳಿಗಳನ್ನು ಓಡಿಸಲು ಜಮೀನುಗಳಲ್ಲಿ ಶಬ್ದ ಮಾಡಲು ಕೂಲಿ ನೀಡಿ, ಆಳುಗಳನ್ನು ಇರಿಸಿ ಬೆಳೆ ಕಾಯುತ್ತಿದ್ದಾರೆ. ಸಂತೇಬೆನ್ನೂರಿನ ಕೂಗಳತೆಯಲ್ಲಿರುವ ಎಸ್​ಬಿಆರ್​ ಕಾಲೋನಿ, ಸಿದ್ದನಮಠ, ಚಿಕ್ಕಬ್ಬಿಗೆರೆ, ದೊಡ್ಡಬ್ಬಿಗೆರೆ, ಹೊಳೆನೂರು ಗ್ರಾಮಗಳಲ್ಲಿ ಗಿಳಿಗಳ ಕಾಟ ಮಿತಿಮೀರಿದೆ.‌ ಮೆಕ್ಕೆಜೋಳವನ್ನು ಮೊದಲ ರೋಹಿಣಿ ಮಳೆಯಲ್ಲೇ ಬೆಳೆಯಬೇಕಾಗುತ್ತದೆ, ಇಲ್ಲದಿದ್ದರೆ ರೋಗ ತಗುಲುತ್ತದೆ.

ಈ ಟಿವಿ ಭಾರತ್‌ ಈ ಬಗ್ಗೆ ವಿಶೇಷ ವರದಿ ಮಾಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರೈತ  ಯತೀಶ್​  ”5 ಎಕರೆಯಲ್ಲಿ 1.5 ಲಕ್ಷ ಖರ್ಚು ಮಾಡಿ ಪಾಪ್​​ಕಾರ್ನ್ ಮೆಕ್ಕೆಜೋಳ ಬೆಳೆಯಲಾಗಿದೆ. ಅದರೆ, ಗಿಳಿಗಳ ಕಾಟ ಹೆಚ್ಚಾಗಿದೆ. ಇದರಿಂದಾಗಿ ಜೀವನ ನಿರ್ವಹಣೆ ಮಾಡುವುದೇ ಕಷ್ಟಕರವಾಗಿದೆ. ಬೆಳೆಯು ಮನುಷ್ಯನ ಆಹಾರದ ಅವಿಭಾಜ್ಯ ಭಾಗವಾಗಿದೆ. ಜೋಳದ ಹಾಲುಕಾಳನ್ನೇ ಗಿಳಿಗಳು ತಿನ್ನುತ್ತಿವೆ. ಸಾವಿರಾರು ಗಿಳಿಗಳು ಗುಂಪಾಗಿ ಬಂದು ಕೆಲ ನಿಮಿಷಗಳಲ್ಲೇ ತೆನೆ ನಾಶ ಮಾಡುತ್ತಿವೆ. ರಾಜ್ಯ, ಕೇಂದ್ರ ಸರ್ಕಾರ ಪರಿಹಾರ ನೀಡಬೇಕಾಗಿದೆ. ಕಳೆದ ಬಾರಿ ಐದು ಎಕರೆ ಜೋಳ ಬೆಳೆದಿದ್ದು, 50 ಚೀಲ ಫಸಲು ಬರಬೇಕಿತ್ತು. ಆದರೆ, ಕೇವಲ 15 ಚೀಲಗಳಷ್ಟು ಮಾತ್ರ ಬಂದಿತ್ತು‌. ಹೀಗೆ, ಗಿಳಿಗಳ ಕಾಟ ಮುಂದುವರೆದರೆ ಈ ಬಾರಿಯೂ 20 ಚೀಲ ಫಸಲು ಬರುವುದೂ ಅನುಮಾನ ಎಂದರು. “ಸದ್ಯ 4-5 ಸಾವಿರ ರೂಪಾಯಿ ಪ್ರತಿ ಕ್ವಿಂಟಾಲ್​ಗೆ ಬೆಲೆ ಇದೆ. ಬೀಜ ಬಿತ್ತನೆ, ಗೊಬ್ಬರ ಹಾಕಲು ಕೂಲಿಗೆ ಒಂದು ಎಕರೆಗೆ 25 ಸಾವಿರ ರೂ. ವ್ಯಯ ಮಾಡಲಾಗುತ್ತದೆ‌. ಒಂದು ಎಕರೆಗೆ 8ರಿಂದ 10 ಕ್ವಿಂಟಾಲ್​ ಇಳುವರಿ ಬರುತ್ತಿತ್ತು‌. ಇದೀಗ ಗಿಳಿಗಳ ಕಾಟದಿಂದ ಒಂದು ಎಕರೆಗೆ 2ರಿಂದ 3 ಕ್ವಿಂಟಾಲ್ ಮಾತ್ರ ಸಿಗುತ್ತಿದೆ. ಈ ಜೋಳವು ಪಾಪ್​ಕಾರ್ನ್, ಚಪಾತಿ ಹಿಟ್ಟು, ರವಾ ಮಾಡಲು ಉಪಯೋಗವಾಗುತ್ತದೆ” ಎಂದು ಮತ್ತೊಬ್ಬ ರೈತ ಪ್ರಸನ್ನ ಕುಮಾರ್ ಹೇಳಿದರು.

ಗಿಳಿಗಳನ್ನು ಓಡಿಸಲು ತಟ್ಟೆ ಶಬ್ದಗಿಳಿಗಳನ್ನು ಓಡಿಸಲು ತಟ್ಟೆ ಬಾರಿಸುವುದು, ಸ್ಪೀಕರ್​, ಖಾಲಿ ಡಬ್ಬ ಬಾರಿಸುವುದು, ಕೂಗುವುದು ಸೇರಿ ಎಲ್ಲ ರೀತಿಯಲ್ಲಿ ವಿನೂತನ ಪ್ರಯೋಗ ಮಾಡಲಾಗುತ್ತಿದೆ. ಆದರೂ ಕೂಡ ಗಿಳಿಗಳ ಕಾಟ ಮುಂದುವರೆದಿದ್ದು, ರೈತರು ಹೈರಾಣಾಗಿದ್ದಾರೆ.

ಮೂಲ :ಈಟಿವಿ ಭಾರತ್

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

29 minutes ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

40 minutes ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

44 minutes ago

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅಳಿವಿನ ಅಂಚಿನಲ್ಲಿರುವ ಅಪರೂಪದ ಕಾಡು ಮೇಕೆ

ಕಾಶ್ಮೀರ ಕಣಿವೆಯ ಕಾಡುಗಳಲ್ಲಿ ಅತ್ಯಂತ  ಗಮನ ಸೆಳೆಯುವ ಪೀರ್ ಪಂಜಾಲ್ ಪರ್ವತಶ್ರೇಣಿಯಲ್ಲಿ ಕಡಿದಾದ…

45 minutes ago

ಬಿಳಿ ಅಕ್ಕಿ ತಿನ್ನುವುದರಿಂದ ದಪ್ಪ ಆಗುತ್ತದೆಯೇ..? ಆಹಾರ ವಿಜ್ಞಾನ ಏನು ಹೇಳುತ್ತದೆ..?

ಭಾರತೀಯ ಆಹಾರ ಪದ್ಧತಿಯಲ್ಲಿ ಬಿಳಿ ಅಕ್ಕಿ ಶತಮಾನಗಳಿಂದ ಪ್ರಮುಖ ಸ್ಥಾನ ಹೊಂದಿದೆ. ಆದರೆ…

54 minutes ago

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?

ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…

14 hours ago