Advertisement
ಸುದ್ದಿಗಳು

ವಿವೇಕಾನಂದಕಾಲೇಜಿನಲ್ಲಿ ‘ಪಥ’ ಕಿರುಚಿತ್ರ ಬಿಡುಗಡೆ | ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕು- ರೂಪೇಶ್ ಶೆಟ್ಟಿ

Share

ಪ್ರಸ್ತುತ ದಿನಗಳಿಗೆ ಹೋಲಿಸಿದರೆ ಅಂದಿನ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಅವಕಾಶಗಳು ಇರಲಿಲ್ಲ.ಆದರೆ ಈಗ ವಿದ್ಯಾರ್ಜನೆಗೈಯುವ ವಿದ್ಯಾರ್ಥಿಗಳು ಓಡುತ್ತಿರುವ ಕಾಲದ ಜೊತೆ ಸೇರಿಕೊಂಡಿದ್ದಾರೆ. ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ವಿಪುಲವಾದ ಅವಕಾಶಗಳಿವೆ. ಹಾಗಾಗಿ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ‘ಪಥ’ದಂತಹ ಒಳ್ಳೆಯ ಕಥೆಗಳು, ಕಿರುಚಿತ್ರಗಳು ಇನ್ನೂ ಹೆಚ್ಚು ಮೂಡಿಬರಲಿ ಎಂದುಖ್ಯಾತ ನಟ,ಬಿಗ್ ಬಾಸ್ ನ ವಿನ್ನರ್‍ರೂಪೇಶ್ ಶೆಟ್ಟಿ ಮಾತನಾಡಿದರು.

Advertisement

ಪುತ್ತೂರಿನ ವಿವೇಕಾನಂದಕಾಲೇಜಿನ(ಸ್ವಾಯತ್ತ) ಐಕ್ಯೂಎಸಿ ಹಾಗೂ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ ‘ಪಥ’ ಕನ್ನಡಕಿರುಚಿತ್ರದ ಬಿಡುಗಡೆ ಸಮಾರಂಭದಲ್ಲಿಉದ್ಘಾಟಕರಾಗಿ ಮಾತನಾಡಿದರು.

ಈ ಸಂದರ್ಭದಲ್ಲಿಇನ್ನೋರ್ವ ಮುಖ್ಯಅತಿಥಿಯಾಗಿ ಭಾಗವಹಿಸಿದ ತುಳುನಾಡಿನ ಖ್ಯಾತ ಹಾಸ್ಯ ನಟ, ಕಾಂತಾರ ಖ್ಯಾತಿಯ ದೀಪಕ್‍ ರೈ ಪಾಣಾಜೆ ಮಾತನಾಡಿ, ವಿವೇಕಾನಂದ ಕಾಲೇಜು ಪಠ್ಯದ ಜೊತೆಗೆ ಪಠ್ಯತರ ಕಾರ್ಯಗಳಿಗೆ ಬೆನ್ನೆಲುಬಾಗಿದೆ.ಮಕ್ಕಳು ಓದುವುದರ ಜೊತೆಗೆ ತಮಗೆಯಾವ ವಿಷಯದಲ್ಲಿ ಆಸಕ್ತಿ ಇವೆಯೋ ಅದರಲ್ಲಿ ಭಾಗವಹಿಸುವಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣಕೆ.ಎನ್ ಮಾತನಾಡಿ, ಮಕ್ಕಳ ಬೆಳವಣಿಗೆ ನಮ್ಮ ಸಹಕಾರ ಎಂದಿಗೂ ಇದ್ದೇ ಇರುತ್ತದೆ.ಶಿಕ್ಷಣದ ಜೊತೆಗೆಇತರ ಚಟುವಟಿಕೆಗಳೂ ಅಗತ್ಯ ಎಂದರು.

ಪಥ ಕಿರುಚಿತ್ರವು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಅಚಲ್‍ ಉಬರಡ್ಕ ನಿರ್ದೇಶಿಸಿ, ಯೋಶಿತ್ ಬನ್ನೂರು ಛಾಯಾಗ್ರಹಣ ಹಾಗೂ ಸಂಕಲನವನ್ನು ನಮನ್ ಶೆಟ್ಟಿ ಮಾಡಿದ್ದಾರೆ. ಅಶ್ವಿನ್ ಬಾಬಣ್ಣ ಸಂಗೀತ ನಿರ್ದೇಶನ ಮಾಡಿರುತ್ತಾರೆ. ಪಥಕಿರುಚಿತ್ರದ ನಾಯಕನಾಗಿ ಅಚಲ್‍ಉಬರಡ್ಕ ಮತ್ತು ನಾಯಕಿಯಾಗಿ ವಿಷ್ರಿತ ಆಚಾರ್ಯ ಅವರು ಅಭಿನಯಿಸಿದ್ದಾರೆ ಹಾಗೂ ಶರತ್ ಕೆ ಎನ್, ಸ್ವಸ್ತಿಕ್ ಶೆಟ್ಟಿ,ಅರಹಂತ್‍ಜೈನ್,ಗಗನ್‍ದೀಪ್, ಮಂಜುನಾಥ್‍ ಜೋಡುಕಲ್ಲು, ಸುರಕ್ಷಾ ಮುಂತಾದವರು ಅಭಿನಯಿಸಿದ್ದಾರೆ.

ವೇದಿಕೆಯಲ್ಲಿ ಪುತ್ತೂರಿನ ಕಹಳೆ ನ್ಯೂಸ್ ನ ಮುಖ್ಯ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ, ಪ್ರಾಂಶುಪಾಲ ಪ್ರೊ.ಗಣಪತಿ ಭಟ್, ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್ ಜಿ, ವಿಶೇಷ ಅಧಿಕಾರಿ ಶ್ರೀಧರ್ ನಾಯ್ಕ್ ಭಟ್ ಉಪಸ್ಥಿತರಿದ್ದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ ಆರ್ ನಿಡ್ಪಳ್ಳಿ ಪ್ರಸ್ತಾವಿಸಿ ಸ್ವಾಗತಿಸಿದರು.ವಿದ್ಯಾರ್ಥಿ ಮಂಜುನಾಥ್‍ ಜೋಡುಕಲ್ಲು ವಂದಿಸಿ, ಹರಿಪ್ರಸಾದ್ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

7 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

13 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

24 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

24 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago