Advertisement
ಸುದ್ದಿಗಳು

ವಿವೇಕಾನಂದಕಾಲೇಜಿನಲ್ಲಿ ‘ಪಥ’ ಕಿರುಚಿತ್ರ ಬಿಡುಗಡೆ | ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕು- ರೂಪೇಶ್ ಶೆಟ್ಟಿ

Share

ಪ್ರಸ್ತುತ ದಿನಗಳಿಗೆ ಹೋಲಿಸಿದರೆ ಅಂದಿನ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಅವಕಾಶಗಳು ಇರಲಿಲ್ಲ.ಆದರೆ ಈಗ ವಿದ್ಯಾರ್ಜನೆಗೈಯುವ ವಿದ್ಯಾರ್ಥಿಗಳು ಓಡುತ್ತಿರುವ ಕಾಲದ ಜೊತೆ ಸೇರಿಕೊಂಡಿದ್ದಾರೆ. ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ವಿಪುಲವಾದ ಅವಕಾಶಗಳಿವೆ. ಹಾಗಾಗಿ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ‘ಪಥ’ದಂತಹ ಒಳ್ಳೆಯ ಕಥೆಗಳು, ಕಿರುಚಿತ್ರಗಳು ಇನ್ನೂ ಹೆಚ್ಚು ಮೂಡಿಬರಲಿ ಎಂದುಖ್ಯಾತ ನಟ,ಬಿಗ್ ಬಾಸ್ ನ ವಿನ್ನರ್‍ರೂಪೇಶ್ ಶೆಟ್ಟಿ ಮಾತನಾಡಿದರು.

ಪುತ್ತೂರಿನ ವಿವೇಕಾನಂದಕಾಲೇಜಿನ(ಸ್ವಾಯತ್ತ) ಐಕ್ಯೂಎಸಿ ಹಾಗೂ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ ‘ಪಥ’ ಕನ್ನಡಕಿರುಚಿತ್ರದ ಬಿಡುಗಡೆ ಸಮಾರಂಭದಲ್ಲಿಉದ್ಘಾಟಕರಾಗಿ ಮಾತನಾಡಿದರು.

ಈ ಸಂದರ್ಭದಲ್ಲಿಇನ್ನೋರ್ವ ಮುಖ್ಯಅತಿಥಿಯಾಗಿ ಭಾಗವಹಿಸಿದ ತುಳುನಾಡಿನ ಖ್ಯಾತ ಹಾಸ್ಯ ನಟ, ಕಾಂತಾರ ಖ್ಯಾತಿಯ ದೀಪಕ್‍ ರೈ ಪಾಣಾಜೆ ಮಾತನಾಡಿ, ವಿವೇಕಾನಂದ ಕಾಲೇಜು ಪಠ್ಯದ ಜೊತೆಗೆ ಪಠ್ಯತರ ಕಾರ್ಯಗಳಿಗೆ ಬೆನ್ನೆಲುಬಾಗಿದೆ.ಮಕ್ಕಳು ಓದುವುದರ ಜೊತೆಗೆ ತಮಗೆಯಾವ ವಿಷಯದಲ್ಲಿ ಆಸಕ್ತಿ ಇವೆಯೋ ಅದರಲ್ಲಿ ಭಾಗವಹಿಸುವಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಾ ಬಂದಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣಕೆ.ಎನ್ ಮಾತನಾಡಿ, ಮಕ್ಕಳ ಬೆಳವಣಿಗೆ ನಮ್ಮ ಸಹಕಾರ ಎಂದಿಗೂ ಇದ್ದೇ ಇರುತ್ತದೆ.ಶಿಕ್ಷಣದ ಜೊತೆಗೆಇತರ ಚಟುವಟಿಕೆಗಳೂ ಅಗತ್ಯ ಎಂದರು.

ಪಥ ಕಿರುಚಿತ್ರವು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಅಚಲ್‍ ಉಬರಡ್ಕ ನಿರ್ದೇಶಿಸಿ, ಯೋಶಿತ್ ಬನ್ನೂರು ಛಾಯಾಗ್ರಹಣ ಹಾಗೂ ಸಂಕಲನವನ್ನು ನಮನ್ ಶೆಟ್ಟಿ ಮಾಡಿದ್ದಾರೆ. ಅಶ್ವಿನ್ ಬಾಬಣ್ಣ ಸಂಗೀತ ನಿರ್ದೇಶನ ಮಾಡಿರುತ್ತಾರೆ. ಪಥಕಿರುಚಿತ್ರದ ನಾಯಕನಾಗಿ ಅಚಲ್‍ಉಬರಡ್ಕ ಮತ್ತು ನಾಯಕಿಯಾಗಿ ವಿಷ್ರಿತ ಆಚಾರ್ಯ ಅವರು ಅಭಿನಯಿಸಿದ್ದಾರೆ ಹಾಗೂ ಶರತ್ ಕೆ ಎನ್, ಸ್ವಸ್ತಿಕ್ ಶೆಟ್ಟಿ,ಅರಹಂತ್‍ಜೈನ್,ಗಗನ್‍ದೀಪ್, ಮಂಜುನಾಥ್‍ ಜೋಡುಕಲ್ಲು, ಸುರಕ್ಷಾ ಮುಂತಾದವರು ಅಭಿನಯಿಸಿದ್ದಾರೆ.

ವೇದಿಕೆಯಲ್ಲಿ ಪುತ್ತೂರಿನ ಕಹಳೆ ನ್ಯೂಸ್ ನ ಮುಖ್ಯ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ, ಪ್ರಾಂಶುಪಾಲ ಪ್ರೊ.ಗಣಪತಿ ಭಟ್, ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ್ ಹೆಚ್ ಜಿ, ವಿಶೇಷ ಅಧಿಕಾರಿ ಶ್ರೀಧರ್ ನಾಯ್ಕ್ ಭಟ್ ಉಪಸ್ಥಿತರಿದ್ದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಭವ್ಯ ಪಿ ಆರ್ ನಿಡ್ಪಳ್ಳಿ ಪ್ರಸ್ತಾವಿಸಿ ಸ್ವಾಗತಿಸಿದರು.ವಿದ್ಯಾರ್ಥಿ ಮಂಜುನಾಥ್‍ ಜೋಡುಕಲ್ಲು ವಂದಿಸಿ, ಹರಿಪ್ರಸಾದ್ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

3 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

12 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

16 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago