Advertisement
ಸಂಪಾದಕೀಯ ಆಯ್ಕೆ

ಸಂಕ್ರಾಂತಿಗೆ ಕಪ್ಪು ಕಬ್ಬಿನ ಭರ್ಜರಿ ಬೇಡಿಕೆ | ಪಟ್ಲಿ ಗ್ರಾಮದಿಂದ ಹೊರರಾಜ್ಯಗಳಿಗೂ ಸರಬರಾಜು

Share

ಪಟ್ಲಿ ಗ್ರಾಮ ಕಪ್ಪು ಕಬ್ಬು ಬೆಳೆಯಲ್ಲಿ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿದೆ. ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಇಲ್ಲಿನ ಕಪ್ಪು ಕಬ್ಬಿಗೆ ಈ ಬಾರಿ ಕೂಡ ಭರ್ಜರಿ ಬೇಡಿಕೆ ಕಂಡುಬಂದಿದ್ದು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಜೊತೆಗೆ ಹೊರರಾಜ್ಯಗಳಿಗೂ ಕಬ್ಬು ಸರಬರಾಜು ಆಗುತ್ತಿದೆ.

ಚನ್ನಪಟ್ಟಣ ಸಮೀಪದ ಪಟ್ಲಿ ಗ್ರಾಮದಲ್ಲಿ ಬೆಳೆದ ಕಪ್ಪು ಕಬ್ಬು ರುಚಿ, ತೂಕ ಮತ್ತು ಗುಣಮಟ್ಟದ ಕಾರಣದಿಂದ ವರ್ಷಗಳಿಂದಲೇ ಮಾರುಕಟ್ಟೆಯಲ್ಲಿ ಹೆಚ್ಚಿನ ಮೌಲ್ಯ ಪಡೆದುಕೊಳ್ಳುತ್ತಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಬೆಲೆ ಏರಿಳಿತ ಕಂಡಿದ್ದರೂ, ಸಂಕ್ರಾಂತಿ ಹಬ್ಬಕ್ಕೆಂದೇ ಈ ವಿಶೇಷ ಕಬ್ಬು ಬೆಳೆಯುವ ಪರಂಪರೆಯನ್ನು ರೈತರು ಮುಂದುವರಿಸಿಕೊಂಡು ಬಂದಿದ್ದಾರೆ.

ಈ ಬಾರಿ ಸ್ಥಳದಲ್ಲೇ 10 ಕಬ್ಬುಗಳಿಗೆ 120 ರೂಪಾಯಿಗಿಂತ ಮೇಲ್ಪಟ್ಟ ದರ ಲಭ್ಯವಾಗುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ವ್ಯಾಪಾರಿಗಳು ಪಟ್ಲಿ ಗ್ರಾಮಕ್ಕೆ ನೇರವಾಗಿ ಬಂದು ಕಬ್ಬು ಖರೀದಿ ಮಾಡುತ್ತಿದ್ದಾರೆ.

ಕೆ. ಲೋಕೇಶ್, ಕಳೆದ 20 ವರ್ಷಗಳಿಂದ ಕಬ್ಬಿನ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದು, ಪಟ್ಲಿ ಗ್ರಾಮದ ಕಪ್ಪು ಕಬ್ಬಿಗೆ ಮಾರುಕಟ್ಟೆಯಲ್ಲಿ ಸದಾ ಹೆಚ್ಚಿನ ಬೇಡಿಕೆ ಇದೆ ಎಂದು ಹೇಳುತ್ತಾರೆ.

ವ್ಯಾಪಾರಿ ಕಾಂತರಾಜ್, ಕಳೆದ ಎರಡು ವರ್ಷಗಳಿಂದ ಪಟ್ಲಿ ಗ್ರಾಮದಿಂದ ಕಬ್ಬು ಖರೀದಿ ಮಾಡಿ ಮಾಗಡಿಯಲ್ಲಿ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದರು. “ಇಲ್ಲಿನ ಕಬ್ಬಿಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ” ಎಂದು ಹೇಳಿದರು.

ಕಳೆದ 20 ವರ್ಷಗಳಿಂದ ಸಂಕ್ರಾಂತಿ ಹಬ್ಬಕ್ಕಾಗಿ ಮಾತ್ರವೇ ಕಪ್ಪು ಕಬ್ಬು ಬೆಳೆಯುತ್ತಿದ್ದೇವೆ. ಬೆಂಗಳೂರು ಮಾತ್ರವಲ್ಲದೆ ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹೊರರಾಜ್ಯಗಳಿಗೂ ಪೂರೈಕೆ ಮಾಡಲಾಗುತ್ತಿದೆ. ಈ ಬಾರಿ ನಿರೀಕ್ಷೆಗೆ ತಕ್ಕ ಬೆಲೆ ಸಿಕ್ಕಿರುವುದು ಖುಷಿ ತಂದಿದೆ” ಎಂದು ರೈತ ಕುಮಾರ್ ಸಂತಸ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

21 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago