Advertisement
MIRROR FOCUS

ಪತ್ತನಾಜೆಗೆ ಹತ್ತುಹನಿ……

Share

ಬೆಳಗಿನಿಂದಲೇ ಸಡಗರದಿಂದ ಕೆಲಸ ಮಾಡುತ್ತಿರುವ ಅಜ್ಜಿಯನ್ನು ರಜೆಯಲ್ಲಿ ಮನೆಗೆ ಬಂದ ಮೊಮ್ಮಗಳಿಗೆ ನೋಡಿಯೇ ಬಾಕಿ..! ಯಾವಾಗಲೂ ಅಲ್ಲಿ ನೋವು ಇಲ್ಲಿ ನೋವು ಎಂದು ಬೆನ್ನು ಬಗ್ಗಿಸಿ ನಡೆಯುವ ಅಜ್ಜಿಯ ನೋವುಗಳೆಲ್ಲಾ ಇಂದು ಮಾಯ. ಕುತೂಹಲದಿಂದ ಅಜ್ಜಿಯನ್ನು ನೋಡುತ್ತಿದ್ದ ಮೊಮ್ಮಗಳಿಗೆ ಏನೂ ಕೇಳದೇ ಉತ್ತರ ಸಿಕ್ಕಿತು….. ಇವತ್ತು “ಪತ್ತನಾಜೆ”ಯಲ್ಲವಾ, ಮಾವ ಮನೆಗೆ ಬರುತ್ತಿದ್ದಾನೆ…!

ಬಹಳ ಸಮಯದ ಮೇಲೆ ಮನೆಗೆ ಬರುತ್ತಿದ್ದಾನೆ. ನೀನು ಬಂದುದು ನೋಡಿ ಅವನು ಖುಷಿ ಪಡುತ್ತಾನೆ . ಯಕ್ಷಗಾನ ಮೇಳದಲ್ಲಿ ವೇಷ ಹಾಕುವ ಮಾವನೆಂದರೆ ಮಕ್ಕಳಿಗೆ ಬಹಳ ಇಷ್ಟ. ಮೇಳದ ರಂಜನೀಯ ಕಥೆಗಳನ್ನು, ಪೌರಾಣಿಕ ಪ್ರಸಂಗಗಳನ್ನು ಮಾವ ಹೇಳುತ್ತಿದ್ದರೆ ಮಕ್ಕಳಿಗೆ ಸಮಯ ಹೋದದ್ದೇ ಗೊತ್ತಾಗುತ್ತಿರಲಿಲ್ಲ. ಹೌದಾ ಮಾವನಿಗೆ ರಜೆಯುಂಟಾ? ಎಷ್ಟು ದಿನ ? ಎಂಬ ಪ್ರಶ್ನೆಗೆ ಅಜ್ಜಿ ಖುಷಿಯಿಂದ ಉತ್ತರ ಕೊಟ್ಟಳು. ನೋಡು ಮಗ ಇಂದು ಪತ್ತನಾಜೆ. ತುಳು ತಿಂಗಳ ಹತ್ತನೇಯ ದಿನ. ಇಂದಿನಿಂದ ಮಳೆಗಾಲ ಆರಂಭ ಎಂಬುದು ಇಲ್ಲಿನವರ ನಂಬಿಕೆ. ಹಾಗಾಗಿ ಭೂತ ಕೋಲ, ನೇಮ, ತಂಬಿಲ, ಯಕ್ಷಗಾನ, ಜಾತ್ರೆಗಳಿಗೆಲ್ಲ ಇನ್ನು ವಿರಾಮ.ಗದ್ದೆ ಬೇಸಾಯದ ಕೆಲಸಗಳೆಲ್ಲ ಆರಂಭಿಸಲು ಸಕಾಲ. ಪತ್ತನಾಜೆಯಾದ ಮೇಲೆ ದೈವ ಬೂತಗಳೆಲ್ಲಾ ಘಟ್ಟ ಹತ್ತುತ್ತವೆ ಎಂಬುದು ಜನಸಾಮಾನ್ಯರ ನಂಬಿಕೆ. ದೀಪೋತ್ಸವಕ್ಕೆ ಮತ್ತೆ ಶುರು ಆಗುವ ಮೇಳಗಳ ತಿರುಗಾಟಕ್ಕೆ ಪತ್ತನಾಜೆಯಿಂದ ವಿಶ್ರಾಂತಿ. ಊರಿಂದ ಊರಿಗೆ ತಿರುಗಾಡಿ ಸುಸ್ತಾದ ಕಲಾವಿದರ ಪಯಣಕ್ಕೆ ತಾತ್ಕಾಲಿಕ ವಿರಾಮ. ಬೇಸಾಯ ,ತೋಟದ ಕೆಲಸಗಳಲ್ಲಿ ‌ಮಾವ ತೊಡಗುವುದರಿಂದ ನಮಗೂ ನೆಮ್ಮದಿ ಎಂದು ಅಜ್ಜಿಯ ಕಣ್ಣಲ್ಲಿ ‌ತೆಳ್ಳನೆಯ ಕಣ್ಣೀರು.

ಪತ್ತನಾಜೆಯು ದಕ್ಷಿಣ ಕನ್ನಡ , ಉಡುಪಿ ಕಾಸರಗೋಡುಗಳಲ್ಲಿ ಆಚರಣೆಯಲ್ಲಿದೆ. ಹಿಂದೆ ಆರು ತಿಂಗಳು ಸತತ ಮಳೆಯಾಗುತ್ತಿದ್ದದ್ದರಿಂದ ‌ಜಾತ್ರೆ, ನೇಮಗಳು, ಯಕ್ಷಗಾನಗಳನ್ನು ಈ ತಿಂಗಳುಗಳಲ್ಲಿ ‌ನಡೆಸುವುದು ಕಷ್ಟಸಾಧ್ಯವಾದುದರಿಂದ
ಪತ್ತನಾಜೆಯನ್ನು ಒಂದು ಗಡುವೆಂದು ಜನರು ಪರಿಗಣಿಸಿರುವ ಸಾಧ್ಯತೆ ಇದೆ. ಆದರೆ ಇಲ್ಲಿನ ಜನರು ಈ ಪದ್ಧತಿ ಯನ್ನು ಬಹು ಶ್ರದ್ಧೆಯಿಂದ ಇಂದಿಗೂ ಪಾಲಿಸಿಕೊಂಡು ಬಂದಿದ್ದಾರೆ. ಪತ್ತನಾಜೆಗೆ ಪತ್ತ್ ಪನಿ ಎಂಬ ಮಾತು ಚಾಲ್ತಿಯಲ್ಲಿದೆ.

ಬರಹ :
ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

7 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

7 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

9 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

16 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

17 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

18 hours ago