ಬೆಳಗಿನಿಂದಲೇ ಸಡಗರದಿಂದ ಕೆಲಸ ಮಾಡುತ್ತಿರುವ ಅಜ್ಜಿಯನ್ನು ರಜೆಯಲ್ಲಿ ಮನೆಗೆ ಬಂದ ಮೊಮ್ಮಗಳಿಗೆ ನೋಡಿಯೇ ಬಾಕಿ..! ಯಾವಾಗಲೂ ಅಲ್ಲಿ ನೋವು ಇಲ್ಲಿ ನೋವು ಎಂದು ಬೆನ್ನು ಬಗ್ಗಿಸಿ ನಡೆಯುವ ಅಜ್ಜಿಯ ನೋವುಗಳೆಲ್ಲಾ ಇಂದು ಮಾಯ. ಕುತೂಹಲದಿಂದ ಅಜ್ಜಿಯನ್ನು ನೋಡುತ್ತಿದ್ದ ಮೊಮ್ಮಗಳಿಗೆ ಏನೂ ಕೇಳದೇ ಉತ್ತರ ಸಿಕ್ಕಿತು….. ಇವತ್ತು “ಪತ್ತನಾಜೆ”ಯಲ್ಲವಾ, ಮಾವ ಮನೆಗೆ ಬರುತ್ತಿದ್ದಾನೆ…!
ಬಹಳ ಸಮಯದ ಮೇಲೆ ಮನೆಗೆ ಬರುತ್ತಿದ್ದಾನೆ. ನೀನು ಬಂದುದು ನೋಡಿ ಅವನು ಖುಷಿ ಪಡುತ್ತಾನೆ . ಯಕ್ಷಗಾನ ಮೇಳದಲ್ಲಿ ವೇಷ ಹಾಕುವ ಮಾವನೆಂದರೆ ಮಕ್ಕಳಿಗೆ ಬಹಳ ಇಷ್ಟ. ಮೇಳದ ರಂಜನೀಯ ಕಥೆಗಳನ್ನು, ಪೌರಾಣಿಕ ಪ್ರಸಂಗಗಳನ್ನು ಮಾವ ಹೇಳುತ್ತಿದ್ದರೆ ಮಕ್ಕಳಿಗೆ ಸಮಯ ಹೋದದ್ದೇ ಗೊತ್ತಾಗುತ್ತಿರಲಿಲ್ಲ. ಹೌದಾ ಮಾವನಿಗೆ ರಜೆಯುಂಟಾ? ಎಷ್ಟು ದಿನ ? ಎಂಬ ಪ್ರಶ್ನೆಗೆ ಅಜ್ಜಿ ಖುಷಿಯಿಂದ ಉತ್ತರ ಕೊಟ್ಟಳು. ನೋಡು ಮಗ ಇಂದು ಪತ್ತನಾಜೆ. ತುಳು ತಿಂಗಳ ಹತ್ತನೇಯ ದಿನ. ಇಂದಿನಿಂದ ಮಳೆಗಾಲ ಆರಂಭ ಎಂಬುದು ಇಲ್ಲಿನವರ ನಂಬಿಕೆ. ಹಾಗಾಗಿ ಭೂತ ಕೋಲ, ನೇಮ, ತಂಬಿಲ, ಯಕ್ಷಗಾನ, ಜಾತ್ರೆಗಳಿಗೆಲ್ಲ ಇನ್ನು ವಿರಾಮ.ಗದ್ದೆ ಬೇಸಾಯದ ಕೆಲಸಗಳೆಲ್ಲ ಆರಂಭಿಸಲು ಸಕಾಲ. ಪತ್ತನಾಜೆಯಾದ ಮೇಲೆ ದೈವ ಬೂತಗಳೆಲ್ಲಾ ಘಟ್ಟ ಹತ್ತುತ್ತವೆ ಎಂಬುದು ಜನಸಾಮಾನ್ಯರ ನಂಬಿಕೆ. ದೀಪೋತ್ಸವಕ್ಕೆ ಮತ್ತೆ ಶುರು ಆಗುವ ಮೇಳಗಳ ತಿರುಗಾಟಕ್ಕೆ ಪತ್ತನಾಜೆಯಿಂದ ವಿಶ್ರಾಂತಿ. ಊರಿಂದ ಊರಿಗೆ ತಿರುಗಾಡಿ ಸುಸ್ತಾದ ಕಲಾವಿದರ ಪಯಣಕ್ಕೆ ತಾತ್ಕಾಲಿಕ ವಿರಾಮ. ಬೇಸಾಯ ,ತೋಟದ ಕೆಲಸಗಳಲ್ಲಿ ಮಾವ ತೊಡಗುವುದರಿಂದ ನಮಗೂ ನೆಮ್ಮದಿ ಎಂದು ಅಜ್ಜಿಯ ಕಣ್ಣಲ್ಲಿ ತೆಳ್ಳನೆಯ ಕಣ್ಣೀರು.
ಪತ್ತನಾಜೆಯು ದಕ್ಷಿಣ ಕನ್ನಡ , ಉಡುಪಿ ಕಾಸರಗೋಡುಗಳಲ್ಲಿ ಆಚರಣೆಯಲ್ಲಿದೆ. ಹಿಂದೆ ಆರು ತಿಂಗಳು ಸತತ ಮಳೆಯಾಗುತ್ತಿದ್ದದ್ದರಿಂದ ಜಾತ್ರೆ, ನೇಮಗಳು, ಯಕ್ಷಗಾನಗಳನ್ನು ಈ ತಿಂಗಳುಗಳಲ್ಲಿ ನಡೆಸುವುದು ಕಷ್ಟಸಾಧ್ಯವಾದುದರಿಂದ
ಪತ್ತನಾಜೆಯನ್ನು ಒಂದು ಗಡುವೆಂದು ಜನರು ಪರಿಗಣಿಸಿರುವ ಸಾಧ್ಯತೆ ಇದೆ. ಆದರೆ ಇಲ್ಲಿನ ಜನರು ಈ ಪದ್ಧತಿ ಯನ್ನು ಬಹು ಶ್ರದ್ಧೆಯಿಂದ ಇಂದಿಗೂ ಪಾಲಿಸಿಕೊಂಡು ಬಂದಿದ್ದಾರೆ. ಪತ್ತನಾಜೆಗೆ ಪತ್ತ್ ಪನಿ ಎಂಬ ಮಾತು ಚಾಲ್ತಿಯಲ್ಲಿದೆ.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…