ಬೆಳಗಿನಿಂದಲೇ ಸಡಗರದಿಂದ ಕೆಲಸ ಮಾಡುತ್ತಿರುವ ಅಜ್ಜಿಯನ್ನು ರಜೆಯಲ್ಲಿ ಮನೆಗೆ ಬಂದ ಮೊಮ್ಮಗಳಿಗೆ ನೋಡಿಯೇ ಬಾಕಿ..! ಯಾವಾಗಲೂ ಅಲ್ಲಿ ನೋವು ಇಲ್ಲಿ ನೋವು ಎಂದು ಬೆನ್ನು ಬಗ್ಗಿಸಿ ನಡೆಯುವ ಅಜ್ಜಿಯ ನೋವುಗಳೆಲ್ಲಾ ಇಂದು ಮಾಯ. ಕುತೂಹಲದಿಂದ ಅಜ್ಜಿಯನ್ನು ನೋಡುತ್ತಿದ್ದ ಮೊಮ್ಮಗಳಿಗೆ ಏನೂ ಕೇಳದೇ ಉತ್ತರ ಸಿಕ್ಕಿತು….. ಇವತ್ತು “ಪತ್ತನಾಜೆ”ಯಲ್ಲವಾ, ಮಾವ ಮನೆಗೆ ಬರುತ್ತಿದ್ದಾನೆ…!
ಬಹಳ ಸಮಯದ ಮೇಲೆ ಮನೆಗೆ ಬರುತ್ತಿದ್ದಾನೆ. ನೀನು ಬಂದುದು ನೋಡಿ ಅವನು ಖುಷಿ ಪಡುತ್ತಾನೆ . ಯಕ್ಷಗಾನ ಮೇಳದಲ್ಲಿ ವೇಷ ಹಾಕುವ ಮಾವನೆಂದರೆ ಮಕ್ಕಳಿಗೆ ಬಹಳ ಇಷ್ಟ. ಮೇಳದ ರಂಜನೀಯ ಕಥೆಗಳನ್ನು, ಪೌರಾಣಿಕ ಪ್ರಸಂಗಗಳನ್ನು ಮಾವ ಹೇಳುತ್ತಿದ್ದರೆ ಮಕ್ಕಳಿಗೆ ಸಮಯ ಹೋದದ್ದೇ ಗೊತ್ತಾಗುತ್ತಿರಲಿಲ್ಲ. ಹೌದಾ ಮಾವನಿಗೆ ರಜೆಯುಂಟಾ? ಎಷ್ಟು ದಿನ ? ಎಂಬ ಪ್ರಶ್ನೆಗೆ ಅಜ್ಜಿ ಖುಷಿಯಿಂದ ಉತ್ತರ ಕೊಟ್ಟಳು. ನೋಡು ಮಗ ಇಂದು ಪತ್ತನಾಜೆ. ತುಳು ತಿಂಗಳ ಹತ್ತನೇಯ ದಿನ. ಇಂದಿನಿಂದ ಮಳೆಗಾಲ ಆರಂಭ ಎಂಬುದು ಇಲ್ಲಿನವರ ನಂಬಿಕೆ. ಹಾಗಾಗಿ ಭೂತ ಕೋಲ, ನೇಮ, ತಂಬಿಲ, ಯಕ್ಷಗಾನ, ಜಾತ್ರೆಗಳಿಗೆಲ್ಲ ಇನ್ನು ವಿರಾಮ.ಗದ್ದೆ ಬೇಸಾಯದ ಕೆಲಸಗಳೆಲ್ಲ ಆರಂಭಿಸಲು ಸಕಾಲ. ಪತ್ತನಾಜೆಯಾದ ಮೇಲೆ ದೈವ ಬೂತಗಳೆಲ್ಲಾ ಘಟ್ಟ ಹತ್ತುತ್ತವೆ ಎಂಬುದು ಜನಸಾಮಾನ್ಯರ ನಂಬಿಕೆ. ದೀಪೋತ್ಸವಕ್ಕೆ ಮತ್ತೆ ಶುರು ಆಗುವ ಮೇಳಗಳ ತಿರುಗಾಟಕ್ಕೆ ಪತ್ತನಾಜೆಯಿಂದ ವಿಶ್ರಾಂತಿ. ಊರಿಂದ ಊರಿಗೆ ತಿರುಗಾಡಿ ಸುಸ್ತಾದ ಕಲಾವಿದರ ಪಯಣಕ್ಕೆ ತಾತ್ಕಾಲಿಕ ವಿರಾಮ. ಬೇಸಾಯ ,ತೋಟದ ಕೆಲಸಗಳಲ್ಲಿ ಮಾವ ತೊಡಗುವುದರಿಂದ ನಮಗೂ ನೆಮ್ಮದಿ ಎಂದು ಅಜ್ಜಿಯ ಕಣ್ಣಲ್ಲಿ ತೆಳ್ಳನೆಯ ಕಣ್ಣೀರು.
ಪತ್ತನಾಜೆಯು ದಕ್ಷಿಣ ಕನ್ನಡ , ಉಡುಪಿ ಕಾಸರಗೋಡುಗಳಲ್ಲಿ ಆಚರಣೆಯಲ್ಲಿದೆ. ಹಿಂದೆ ಆರು ತಿಂಗಳು ಸತತ ಮಳೆಯಾಗುತ್ತಿದ್ದದ್ದರಿಂದ ಜಾತ್ರೆ, ನೇಮಗಳು, ಯಕ್ಷಗಾನಗಳನ್ನು ಈ ತಿಂಗಳುಗಳಲ್ಲಿ ನಡೆಸುವುದು ಕಷ್ಟಸಾಧ್ಯವಾದುದರಿಂದ
ಪತ್ತನಾಜೆಯನ್ನು ಒಂದು ಗಡುವೆಂದು ಜನರು ಪರಿಗಣಿಸಿರುವ ಸಾಧ್ಯತೆ ಇದೆ. ಆದರೆ ಇಲ್ಲಿನ ಜನರು ಈ ಪದ್ಧತಿ ಯನ್ನು ಬಹು ಶ್ರದ್ಧೆಯಿಂದ ಇಂದಿಗೂ ಪಾಲಿಸಿಕೊಂಡು ಬಂದಿದ್ದಾರೆ. ಪತ್ತನಾಜೆಗೆ ಪತ್ತ್ ಪನಿ ಎಂಬ ಮಾತು ಚಾಲ್ತಿಯಲ್ಲಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…