ಸುದ್ದಿಗಳು

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ ಶ್ರೀ ಕೃಷ್ಣ ವಿದ್ಯಾ ಸಮಿತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ಇದರ ಆಡಳಿತ ಹಸ್ತಾಂತರ ಕಾರ್ಯಕ್ರಮವು ಪಟ್ಟೆ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಜರುಗಿತು. ಪಟ್ಟೆ ವಿದ್ಯಾ ಸಂಸ್ಥೆಗಳ ನೂತನ ಆಡಳಿತ ಮಂಡಳಿಯಾಗಿ ಪುತ್ತೂರಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ದ್ವಾರಕಾ ಕಾರ್ಪೋರೇಶನ್‌ ಪ್ರೈವೇಟ್‌ ಲಿಮಿಟೆಡ್‌ನ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ಇವರು ಅಧಿಕಾರ ವಹಿಸಿಕೊಂಡರು.

Advertisement

ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಕೆ ಶಂಕರಿ ಇವರು ಸಂಸ್ಥೆಯ ಕುರಿತು ಮಾತನಾಡಿ ಶುಭ ಹಾರೈಸಿದರು. ಬಳಿಕ ವಿದ್ಯಾ ಸಂಸ್ಥೆಗಳ ನೂತನ ಸಂಚಾಲಕ ವಿಘ್ನೇಶ್‌ ಹಿರಣ್ಯ ಇವರು ಮಾತನಾಡಿ, ದ್ವಾರಕಾ ಸಂಸ್ಥೆಯ ಧ್ಯೇಯೋದ್ದೇಶಗಳು ಹಾಗೂ ಶೈಕ್ಷಣಿಕ ರೂಪುರೇಶೆಗಳ ಸಂಕ್ಷಿಪ್ತ ವಿವರಣೆಯನ್ನು ನೀಡಿದರು.

ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್‌ ಮಾತನಾಡಿ ಪಟ್ಟೆ ವಿದ್ಯಾಸಂಸ್ಥೆಗಳ ಹಿರಿಮೆಯನ್ನು ಸ್ಮರಿಸಿ, ಮುಂದಿನ ದಿನಗಳಲ್ಲಿ ವಿದ್ಯಾಲಯವು ಶೈಕ್ಷಣಿಕವಾಗಿ ಇನ್ನಷ್ಟು ವಿಸ್ತಾರವನ್ನು ಕಾಣಲಿದೆ ಎಂದರು. ಈ ಸಂಸದರ್ಭದಲ್ಲಿ ಸಂಸ್ಥೆಯ ನಿಕಟಪೂರ್ವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರನ್ನು ದ್ವಾರಕಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷರಾದ  ವೇಣುಗೋಪಾಲ್‌ ಭಟ್‌ ಪಟ್ಟೆ, ಸಂಚಾಲಕರಾದ  ನಾರಾಯಣ ಭಟ್‌ ಪಟ್ಟೆ ಹಾಗೂ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ  ಗೋಪಾಲಕೃಷ್ಣ ಭಟ್‌, ಉಪಾಧ್ಯಕ್ಷರಾದ  ಅಮೃತಕೃಷ್ಣ ಎನ್‌, ಸಂಚಾಲಕರಾದ  ವಿಘ್ನೇಶ್‌ ಹಿರಣ್ಯ, ಸದಸ್ಯರಾದ ಗಣರಾಜ ಕುಂಬ್ಳೆ ಉಪಸ್ಥಿತರಿದ್ದರು. ಸಮಾರಂಭದಲ್ಲಿ ನೂತನ ಆಡಳಿತ ಮಂಡಳಿಯ ಸದಸ್ಯರಾದ  ಅಶ್ವಿನಿ ಎನ್‌, ಅಮೃತಾ ಎಸ್‌ ಶಾನ್‌ಭಾಗ್‌,  ಪರಮೇಶ್ವರ ಭಟ್‌, ವೆಂಕಟಕೃಷ್ಣ ಶರ್ಮ ಹಾಗೂ ನಿಕಟ ಪೂರ್ವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.

Advertisement

ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷರಾದ  ವೇಣುಗೋಪಾಲ್‌ ಭಟ್‌ ಪಟ್ಟೆ  ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ  ರಾಜಗೋಪಾಲ್‌ ನಿರೂಪಿಸಿ, ಪ್ರತಿಭಾ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ  ಸುಮನ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

3 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

4 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

12 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

14 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

15 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

21 hours ago