Advertisement
ಸುದ್ದಿಗಳು

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ

Share

ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ ಶ್ರೀ ಕೃಷ್ಣ ವಿದ್ಯಾ ಸಮಿತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ಇದರ ಆಡಳಿತ ಹಸ್ತಾಂತರ ಕಾರ್ಯಕ್ರಮವು ಪಟ್ಟೆ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಜರುಗಿತು. ಪಟ್ಟೆ ವಿದ್ಯಾ ಸಂಸ್ಥೆಗಳ ನೂತನ ಆಡಳಿತ ಮಂಡಳಿಯಾಗಿ ಪುತ್ತೂರಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ದ್ವಾರಕಾ ಕಾರ್ಪೋರೇಶನ್‌ ಪ್ರೈವೇಟ್‌ ಲಿಮಿಟೆಡ್‌ನ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ಇವರು ಅಧಿಕಾರ ವಹಿಸಿಕೊಂಡರು.

ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಕೆ ಶಂಕರಿ ಇವರು ಸಂಸ್ಥೆಯ ಕುರಿತು ಮಾತನಾಡಿ ಶುಭ ಹಾರೈಸಿದರು. ಬಳಿಕ ವಿದ್ಯಾ ಸಂಸ್ಥೆಗಳ ನೂತನ ಸಂಚಾಲಕ ವಿಘ್ನೇಶ್‌ ಹಿರಣ್ಯ ಇವರು ಮಾತನಾಡಿ, ದ್ವಾರಕಾ ಸಂಸ್ಥೆಯ ಧ್ಯೇಯೋದ್ದೇಶಗಳು ಹಾಗೂ ಶೈಕ್ಷಣಿಕ ರೂಪುರೇಶೆಗಳ ಸಂಕ್ಷಿಪ್ತ ವಿವರಣೆಯನ್ನು ನೀಡಿದರು.

ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್‌ ಮಾತನಾಡಿ ಪಟ್ಟೆ ವಿದ್ಯಾಸಂಸ್ಥೆಗಳ ಹಿರಿಮೆಯನ್ನು ಸ್ಮರಿಸಿ, ಮುಂದಿನ ದಿನಗಳಲ್ಲಿ ವಿದ್ಯಾಲಯವು ಶೈಕ್ಷಣಿಕವಾಗಿ ಇನ್ನಷ್ಟು ವಿಸ್ತಾರವನ್ನು ಕಾಣಲಿದೆ ಎಂದರು. ಈ ಸಂಸದರ್ಭದಲ್ಲಿ ಸಂಸ್ಥೆಯ ನಿಕಟಪೂರ್ವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರನ್ನು ದ್ವಾರಕಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷರಾದ  ವೇಣುಗೋಪಾಲ್‌ ಭಟ್‌ ಪಟ್ಟೆ, ಸಂಚಾಲಕರಾದ  ನಾರಾಯಣ ಭಟ್‌ ಪಟ್ಟೆ ಹಾಗೂ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ  ಗೋಪಾಲಕೃಷ್ಣ ಭಟ್‌, ಉಪಾಧ್ಯಕ್ಷರಾದ  ಅಮೃತಕೃಷ್ಣ ಎನ್‌, ಸಂಚಾಲಕರಾದ  ವಿಘ್ನೇಶ್‌ ಹಿರಣ್ಯ, ಸದಸ್ಯರಾದ ಗಣರಾಜ ಕುಂಬ್ಳೆ ಉಪಸ್ಥಿತರಿದ್ದರು. ಸಮಾರಂಭದಲ್ಲಿ ನೂತನ ಆಡಳಿತ ಮಂಡಳಿಯ ಸದಸ್ಯರಾದ  ಅಶ್ವಿನಿ ಎನ್‌, ಅಮೃತಾ ಎಸ್‌ ಶಾನ್‌ಭಾಗ್‌,  ಪರಮೇಶ್ವರ ಭಟ್‌, ವೆಂಕಟಕೃಷ್ಣ ಶರ್ಮ ಹಾಗೂ ನಿಕಟ ಪೂರ್ವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.

ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷರಾದ  ವೇಣುಗೋಪಾಲ್‌ ಭಟ್‌ ಪಟ್ಟೆ  ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ  ರಾಜಗೋಪಾಲ್‌ ನಿರೂಪಿಸಿ, ಪ್ರತಿಭಾ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ  ಸುಮನ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

11 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

20 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

20 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

21 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago