ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿದ ಶಾಸಕ….! | ಪಾವಗಡ ಕ್ಷೇತ್ರದ ಶಾಸಕನಿಂದ ದರ್ಬಾರ್…‌! | ಹಲ್ಲೆ ಮಾಡಿಲ್ಲವೆಂದು ಸ್ಪಷ್ಟನೆ |

April 21, 2022
2:11 PM

ತನ್ನ ಊರಿಗೆ ಸರಿಯಾದ ರಸ್ತೆ ಕೇಳಿದ್ದಕ್ಕೆ ಶಾಸಕರೊಬ್ಬರು ಹಲ್ಲೆ ಮಾಡಿದ ಘಟನೆ ಈ ಚರ್ಚೆಗೆ ಕಾರಣವಾಗಿದೆ. ಪಾವಗಡದ ಶಾಸಕ ವೆಂಕಟರಮಣಪ್ಪ ಅವರು ತನ್ನ ಕ್ಷೇತ್ರದ ಮತದಾರನಿಗೆ ಹಲ್ಲೆ ಮಾಡಿರುವ ಶಾಸಕ. ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ ಶಾಸಕ ವೆಂಕಟರಮಣಪ್ಪ, ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅನೇಕರು ಈ ಘಟನೆಯನ್ನು ಖಂಡಿಸಿದ್ದಾರೆ.

Advertisement
Advertisement

ತುಮಕೂರು ಜಿಲ್ಲೆಯ ಪಾವಗಡ ಪ್ರದೇಶದ ತಮ್ಮ ಗ್ರಾಮದಲ್ಲಿ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಯುವಕ ಶಾಸಕರಿಗೆ ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ವೆಂಕಟರಮಣಪ್ಪ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.ಈ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.

Advertisement

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ವೆಂಕಟರಮಣಪ್ಪ ಅವರು ಈಗಾಗಲೇ ರಸ್ತೆ ದುರಸ್ತಿಗೆ ಅನುದಾನ ಒದಗಿಸಲಾಗಿದೆ. ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ ನಂತರ ಯುವಕನೂ ಮಾನಸಿಕ ಅಸ್ವಸ್ಥ ಎಂದು ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ
July 26, 2025
7:38 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನ ಬೀಜದ ಖಾರದ ಕಡ್ಡಿ
July 26, 2025
7:27 AM
by: ದಿವ್ಯ ಮಹೇಶ್
ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ
July 25, 2025
11:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group