ತನ್ನ ಊರಿಗೆ ಸರಿಯಾದ ರಸ್ತೆ ಕೇಳಿದ್ದಕ್ಕೆ ಶಾಸಕರೊಬ್ಬರು ಹಲ್ಲೆ ಮಾಡಿದ ಘಟನೆ ಈ ಚರ್ಚೆಗೆ ಕಾರಣವಾಗಿದೆ. ಪಾವಗಡದ ಶಾಸಕ ವೆಂಕಟರಮಣಪ್ಪ ಅವರು ತನ್ನ ಕ್ಷೇತ್ರದ ಮತದಾರನಿಗೆ ಹಲ್ಲೆ ಮಾಡಿರುವ ಶಾಸಕ. ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ ಶಾಸಕ ವೆಂಕಟರಮಣಪ್ಪ, ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅನೇಕರು ಈ ಘಟನೆಯನ್ನು ಖಂಡಿಸಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ಪ್ರದೇಶದ ತಮ್ಮ ಗ್ರಾಮದಲ್ಲಿ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಯುವಕ ಶಾಸಕರಿಗೆ ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ವೆಂಕಟರಮಣಪ್ಪ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.ಈ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ವೆಂಕಟರಮಣಪ್ಪ ಅವರು ಈಗಾಗಲೇ ರಸ್ತೆ ದುರಸ್ತಿಗೆ ಅನುದಾನ ಒದಗಿಸಲಾಗಿದೆ. ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ ನಂತರ ಯುವಕನೂ ಮಾನಸಿಕ ಅಸ್ವಸ್ಥ ಎಂದು ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…