ತನ್ನ ಊರಿಗೆ ಸರಿಯಾದ ರಸ್ತೆ ಕೇಳಿದ್ದಕ್ಕೆ ಶಾಸಕರೊಬ್ಬರು ಹಲ್ಲೆ ಮಾಡಿದ ಘಟನೆ ಈ ಚರ್ಚೆಗೆ ಕಾರಣವಾಗಿದೆ. ಪಾವಗಡದ ಶಾಸಕ ವೆಂಕಟರಮಣಪ್ಪ ಅವರು ತನ್ನ ಕ್ಷೇತ್ರದ ಮತದಾರನಿಗೆ ಹಲ್ಲೆ ಮಾಡಿರುವ ಶಾಸಕ. ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ ಶಾಸಕ ವೆಂಕಟರಮಣಪ್ಪ, ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅನೇಕರು ಈ ಘಟನೆಯನ್ನು ಖಂಡಿಸಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ಪ್ರದೇಶದ ತಮ್ಮ ಗ್ರಾಮದಲ್ಲಿ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಯುವಕ ಶಾಸಕರಿಗೆ ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ವೆಂಕಟರಮಣಪ್ಪ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.ಈ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ವೆಂಕಟರಮಣಪ್ಪ ಅವರು ಈಗಾಗಲೇ ರಸ್ತೆ ದುರಸ್ತಿಗೆ ಅನುದಾನ ಒದಗಿಸಲಾಗಿದೆ. ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ ನಂತರ ಯುವಕನೂ ಮಾನಸಿಕ ಅಸ್ವಸ್ಥ ಎಂದು ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…