ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.
ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್ ನ ವೆಂಕಟೇಶ್ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್ಗೆ ದೇಣಿಗೆ ನೀಡಿದರು.
ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…