ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.
ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್ ನ ವೆಂಕಟೇಶ್ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್ಗೆ ದೇಣಿಗೆ ನೀಡಿದರು.
ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…