ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.
ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್ ನ ವೆಂಕಟೇಶ್ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್ಗೆ ದೇಣಿಗೆ ನೀಡಿದರು.
ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…