ಸುದ್ದಿಗಳು

ವಳಲಂಬೆಯಲ್ಲಿ ಪಾವಂಜೆ ಮೇಳದಿಂದ ಯಕ್ಷಗಾನ | ಕಲಾವಿದ ಕುಮಾರ ಸುಬ್ರಹ್ಮಣ್ಯ, ಸತೀಶ್‌ ಪಟ್ಲ ಅವರಿಗೆ ಗೌರವಾರ್ಪಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್‌ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Advertisement
Advertisement

ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್‌ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.

ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್‌ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್‌ ನ ವೆಂಕಟೇಶ್‌ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್‌ಗೆ ದೇಣಿಗೆ ನೀಡಿದರು.

ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್‌ ಪುಚ್ಚಪ್ಪಾಡಿ ವಂದಿಸಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 hour ago

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…

2 hours ago

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

19 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

19 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

20 hours ago