ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.
ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್ ನ ವೆಂಕಟೇಶ್ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್ಗೆ ದೇಣಿಗೆ ನೀಡಿದರು.
ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…