ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.
ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್ ನ ವೆಂಕಟೇಶ್ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್ಗೆ ದೇಣಿಗೆ ನೀಡಿದರು.
ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…