ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.
ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್ ನ ವೆಂಕಟೇಶ್ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್ಗೆ ದೇಣಿಗೆ ನೀಡಿದರು.
ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…