ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.
ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್ ನ ವೆಂಕಟೇಶ್ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್ಗೆ ದೇಣಿಗೆ ನೀಡಿದರು.
ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…