ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪಾವಂಜೆ ಶ್ರೀಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಬಯಲಾಟ ನಡೆಯಿತು. ವಿಶ್ವನಾಥ ಪುಚ್ಚಪ್ಪಾಡಿ ಹಾಗೂ ಮನೆಯವರಿಂದ ಸೇವೆಯಾಟವಾಗಿ ಶ್ರೀದೇವಿ ಮಹಾತ್ಮೆ ಪ್ರಸಂಗ ನಡೆಸಲಾಗಿತ್ತು. ಈ ಸಂದರ್ಭ ಕಲಾವಿದ ಕುಮಾರ ಸುಬ್ರಹ್ಮಣ್ಯ ಹಾಗೂ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಮಾತನಾಡಿದ ಖ್ಯಾತ ಭಾಗವತ ಸತೀಶ್ ಶಟ್ಟಿ ಪಟ್ಲ, ಕುಮಾರ ಸುಬ್ರಹ್ಮಣ್ಯ ಅವರು ಅತ್ಯಂತ ಹಿರಿಯರೂ ಗುರುಗಳೂ ಆಗಿದ್ದಾರೆ. ಅನೇಕರಿಗೆ ಯಕ್ಷಗಾನ ಕಲೆಯನ್ನು ಧಾರೆ ಎರೆದವರು. ಹೀಗಾಗಿ ಸೂಕ್ತ ವ್ಯಕ್ತಿಗೆ ಸನ್ಮಾನ ಮಾಡಲಾಗಿದೆ ಎಂದರು.
ವೇದಿಕೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ ಕೆ ಬೆಳ್ಯಪ್ಪ ಗೌಡ, ಯಕ್ಷಗಾನ ಸಂಘಟಕ ಡಾ.ವಿಷ್ಣುಪ್ರಸಾದ್ , ಸೇವಾಕರ್ತರಾದ ವಿಶ್ವನಾಥ ಪುಚ್ಚಪ್ಪಾಡಿ, ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ ಉಪಸ್ಥಿತರಿದ್ದರು. ಇದೇ ವೇಳೆ ಪುಚ್ಚಪ್ಪಾಡಿ ಮನೆಯವರ ಪರವಾಗಿ ಬ್ರಿವೆರಾ ಟೆಕ್ನಾಲಜೀಸ್ ನ ವೆಂಕಟೇಶ್ ಪುಚ್ಚಪ್ಪಾಡಿ ಅವರು ಯಕ್ಷದ್ರುವ ಪೌಂಡೇಶನ್ಗೆ ದೇಣಿಗೆ ನೀಡಿದರು.
ಅಪರ್ಣಾ ಪುಚ್ಚಪ್ಪಾಡಿ ಸ್ವಾಗತಿಸಿ ನಿರೂಪಿಸಿದರು. ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…