ಅದು ತೊದಲು ನುಡಿಯಲ್ಲಿ ಮಾತನಾಡುತ್ತಾ ಅಕ್ಷರಗಳನ್ನು ಕಲಿಯುವ ಪ್ರಾಯ. ಆದರೆ ಅದಾಗಲೇ ಸರಸ್ವತಿ ದೇವಿ ಆ ಪುಟ್ಟ
ಹುಡುಗಿಯ ಬಾಯಲ್ಲಿ ತಾಳ-ರಾಗ-ಲಯಬದ್ಧವಾಗಿ ಹಾಡಲು ಆಶೀರ್ವಾದಿಸಿ ಆಗಿತ್ತು.
ತನ್ನ ಮೂರನೇ ವಯಸ್ಸಿನಲ್ಲಿಯೇ ವಿದ್ವಾನ್ ಶ್ರೀ ಮಧೂರ್ ಪಿ. ಬಾಲಸುಬ್ರಹ್ಮಣ್ಯಂ ರಿಂದ ಸಂಗೀತಾಭ್ಯಾಸ ಮಾಡಿ ಕನಕದಾಸ ವಾಧಿರಾಜರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರೇ ಪವಿತ್ರಾ ರೂಪೇಶ್. ಪುತ್ತೂರಿನ ಪ್ರತಿಷ್ಟಿತ ಉದ್ಯಮಿ ರೂಪೇಶ್ ಸೇಟ್ ಅವರ ಧರ್ಮಪತ್ನಿ. ಮಣಿಪಾಲದ ಫಾರ್ಮಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಉಡುಪ ಹಾಗೂ ವಿಜಯಲಕ್ಷ್ಮೀ .ಕೆ. ದಂಪತಿಗಳ ಸುಪುತ್ರಿಯಾಗಿರುವ ಪವಿತ್ರಾರವರಿಗೆ ಸಣ್ಣ ವಯಸ್ಸಿನಿಂದಲೇ ಸಂಗೀತ, ಹಾಡುಗಾರಿಕೆಯಲ್ಲಿ ವಿಶೇಷ ಆಸಕ್ತಿ. ವಿದುಷಿ ಶುಭಾ ರಾವ್ ಹಾಗು ವಿದುಷಿ ಶಕುಂತಳಾ ಭಟ್ ಮೊದಲಾದವರಿಂದ ಸಂಗೀತ ಅಭ್ಯಾಸ ಮಾಡಿ, ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರು. 2005ರಲ್ಲಿ ಕರ್ನಾಟಕ ಸರಕಾರ ನಡೆಸಿದ ವಿದ್ವತ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿ
ಸಂಗೀತದಲ್ಲಿ ವಿದುಷಿಯಾದರು. ಇದಲ್ಲದೆ ಸಿ.ಸಿ.ಆರ್,ಟಿ. ವಿದ್ಯಾರ್ಥಿವೇತನವನ್ನು ಏಳು ವರ್ಷ ಪಡೆದುಕೊಂಡ ಗಟ್ಟಿಗಾತಿ ಇವರು. ತಮ್ಮ ಸ್ವರ ಮಾಧುರ್ಯದಿಂದಾಗಿ ಮಂಗಳೂರು ಆಕಾಶವಾಣಿಯಲ್ಲಿ “ಎ” ಗ್ರೇಡ್ ಕಲಾವಿದರಾಗಿ ಸೇವೆ ಸಲ್ಲಿಸಿದ ಅನುಭವವಿದೆ. 2007ರಲ್ಲಿ ಝೀ ಕನ್ನಡ ವಾಹಿನಿ ಗೃಹಿಣಿಯರಿಗಾಗಿ ನಡೆಸಿದ ಸರಿಗಮಪ ಸೀಸನ್ನಲ್ಲಿ ಅಂತಿಮ
ಹಂತದವರೆಗೂ ಪುತ್ತೂರನ್ನು ಪ್ರತಿನಿಧಿಸಿದ ಇವರು ತಮ್ಮ ಮನೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಮಕ್ಕಳಿಗೆ ಸಂಗೀತ ಹಾಗೂ
ಸುಗಮ ಸಂಗೀತ ಹೇಳಿಕೊಡುತ್ತಿದ್ದಾರೆ.
ಮಂಗಳೂರು, ಉಡುಪಿ, ಪುತ್ತೂರು, ಬೆಂಗಳೂರು, ಮೈಸೂರು, ಉಡುಪಿ ಶ್ರೀ ಕೃಷ್ಣಮಠ, ಮಂಗಳೂರಿನ ಕರಾವಳಿ ಉತ್ಸವ,
ದೇವಸ್ಥಾನಗಳು ಹಾಗೂ ಬೇರೆ ಬೇರೆ ಪ್ರಸಿದ್ದ ಸ್ಥಳಗಳಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗು ಸುಗಮ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಪವಿತ್ರಾ ರೂಪೇಶ್ರವರು ತಮ್ಮ ಊರಾದ ಪುತ್ತೂರಿನಲ್ಲಿ “ಕಾಮಾಕ್ಷಿ ಸಂಗೀತ ಪಾಠಶಾಲೆ” ಯ ಮುಖ್ಯಸ್ಥರಾಗಿದ್ದಾರೆ. ಸದ್ಯ ತಮ್ಮದೇ ಒಂದು ಯೂ ಟ್ಯೂಬ್ ಚಾನೆಲ್
ಪ್ರಾರಂಭಿಸಿರುವ ಪವಿತ್ರಾ ರೂಪೇಶ್ ತಮ್ಮ “ಮಿಲೇ ಹೋ ತುಮ್” ಹಿಂದಿ ಆಲ್ಬಮ್ ಹಾಡನ್ನು ಬಿಡುಗಡೆಗೊಳಿಸಿದ್ದಾರೆ. ಶಾಸ್ತ್ರೀಯ ಹಾಗೂ ಫಿಲ್ಮಿ ಮ್ಯೂಸಿಕ್ ಎರಡರಲ್ಲೂ ಸೈ ಎನಿಸಿಕೊಂಡಿರುವ ಪವಿತ್ರಾ ರೂಪೇಶ್ ತಮ್ಮ ಈ ಯಶಸ್ಸಿಗೆ ತಂದೆ- ತಾಯಿ, ಪತಿ, ಅತ್ತೆ- ಮಾವನ, ಬಂಧು-ಬಳಗದವರ ಪ್ರೋತ್ಸಾಹವೇ ಕಾರಣ ಎನ್ನುತ್ತಾರೆ. ಪುತ್ತೂರಿನ ಈ ಸಂಗೀತ ಸಾಧಕಿಯ ಮುಂದಿನ ಪಯಣಕ್ಕೆ ಶುಭ ಹಾರೈಸೋಣ.
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…