Advertisement
The Rural Mirror ವಾರದ ವಿಶೇಷ

ಪುತ್ತೂರಿನ ಸಂಗೀತ ಸಾಧಕಿ – ಪವಿತ್ರಾ ರೂಪೇಶ್

Share

ಅದು ತೊದಲು ನುಡಿಯಲ್ಲಿ ಮಾತನಾಡುತ್ತಾ ಅಕ್ಷರಗಳನ್ನು ಕಲಿಯುವ ಪ್ರಾಯ. ಆದರೆ ಅದಾಗಲೇ ಸರಸ್ವತಿ ದೇವಿ ಆ ಪುಟ್ಟ
ಹುಡುಗಿಯ ಬಾಯಲ್ಲಿ ತಾಳ-ರಾಗ-ಲಯಬದ್ಧವಾಗಿ ಹಾಡಲು ಆಶೀರ್ವಾದಿಸಿ ಆಗಿತ್ತು.

ತನ್ನ ಮೂರನೇ ವಯಸ್ಸಿನಲ್ಲಿಯೇ ವಿದ್ವಾನ್ ಶ್ರೀ ಮಧೂರ್ ಪಿ. ಬಾಲಸುಬ್ರಹ್ಮಣ್ಯಂ ರಿಂದ ಸಂಗೀತಾಭ್ಯಾಸ ಮಾಡಿ ಕನಕದಾಸ ವಾಧಿರಾಜರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರೇ  ಪವಿತ್ರಾ ರೂಪೇಶ್. ಪುತ್ತೂರಿನ ಪ್ರತಿಷ್ಟಿತ ಉದ್ಯಮಿ ರೂಪೇಶ್ ಸೇಟ್‍ ಅವರ ಧರ್ಮಪತ್ನಿ. ಮಣಿಪಾಲದ ಫಾರ್ಮಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಉಡುಪ ಹಾಗೂ ವಿಜಯಲಕ್ಷ್ಮೀ .ಕೆ. ದಂಪತಿಗಳ ಸುಪುತ್ರಿಯಾಗಿರುವ ಪವಿತ್ರಾರವರಿಗೆ ಸಣ್ಣ ವಯಸ್ಸಿನಿಂದಲೇ ಸಂಗೀತ, ಹಾಡುಗಾರಿಕೆಯಲ್ಲಿ ವಿಶೇಷ ಆಸಕ್ತಿ. ವಿದುಷಿ  ಶುಭಾ ರಾವ್ ಹಾಗು ವಿದುಷಿ  ಶಕುಂತಳಾ ಭಟ್ ಮೊದಲಾದವರಿಂದ ಸಂಗೀತ ಅಭ್ಯಾಸ ಮಾಡಿ, ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರು. 2005ರಲ್ಲಿ ಕರ್ನಾಟಕ ಸರಕಾರ ನಡೆಸಿದ ವಿದ್ವತ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿ
ಸಂಗೀತದಲ್ಲಿ ವಿದುಷಿಯಾದರು. ಇದಲ್ಲದೆ ಸಿ.ಸಿ.ಆರ್,ಟಿ. ವಿದ್ಯಾರ್ಥಿವೇತನವನ್ನು ಏಳು ವರ್ಷ ಪಡೆದುಕೊಂಡ ಗಟ್ಟಿಗಾತಿ ಇವರು.  ತಮ್ಮ ಸ್ವರ ಮಾಧುರ್ಯದಿಂದಾಗಿ ಮಂಗಳೂರು ಆಕಾಶವಾಣಿಯಲ್ಲಿ “ಎ” ಗ್ರೇಡ್ ಕಲಾವಿದರಾಗಿ ಸೇವೆ ಸಲ್ಲಿಸಿದ ಅನುಭವವಿದೆ. 2007ರಲ್ಲಿ ಝೀ ಕನ್ನಡ ವಾಹಿನಿ ಗೃಹಿಣಿಯರಿಗಾಗಿ ನಡೆಸಿದ ಸರಿಗಮಪ ಸೀಸನ್‍ನಲ್ಲಿ ಅಂತಿಮ
ಹಂತದವರೆಗೂ ಪುತ್ತೂರನ್ನು ಪ್ರತಿನಿಧಿಸಿದ ಇವರು ತಮ್ಮ ಮನೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಮಕ್ಕಳಿಗೆ ಸಂಗೀತ ಹಾಗೂ
ಸುಗಮ ಸಂಗೀತ ಹೇಳಿಕೊಡುತ್ತಿದ್ದಾರೆ.

 

ಮಂಗಳೂರು, ಉಡುಪಿ, ಪುತ್ತೂರು, ಬೆಂಗಳೂರು, ಮೈಸೂರು, ಉಡುಪಿ ಶ್ರೀ ಕೃಷ್ಣಮಠ, ಮಂಗಳೂರಿನ ಕರಾವಳಿ ಉತ್ಸವ,
ದೇವಸ್ಥಾನಗಳು ಹಾಗೂ ಬೇರೆ ಬೇರೆ ಪ್ರಸಿದ್ದ ಸ್ಥಳಗಳಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗು ಸುಗಮ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಪವಿತ್ರಾ ರೂಪೇಶ್‍ರವರು ತಮ್ಮ ಊರಾದ ಪುತ್ತೂರಿನಲ್ಲಿ “ಕಾಮಾಕ್ಷಿ ಸಂಗೀತ ಪಾಠಶಾಲೆ” ಯ ಮುಖ್ಯಸ್ಥರಾಗಿದ್ದಾರೆ. ಸದ್ಯ ತಮ್ಮದೇ ಒಂದು ಯೂ ಟ್ಯೂಬ್‌ ಚಾನೆಲ್ 

  ಪ್ರಾರಂಭಿಸಿರುವ ಪವಿತ್ರಾ ರೂಪೇಶ್ ತಮ್ಮ “ಮಿಲೇ ಹೋ ತುಮ್” ಹಿಂದಿ ಆಲ್ಬಮ್ ಹಾಡನ್ನು ಬಿಡುಗಡೆಗೊಳಿಸಿದ್ದಾರೆ. ಶಾಸ್ತ್ರೀಯ ಹಾಗೂ ಫಿಲ್ಮಿ ಮ್ಯೂಸಿಕ್ ಎರಡರಲ್ಲೂ ಸೈ ಎನಿಸಿಕೊಂಡಿರುವ ಪವಿತ್ರಾ ರೂಪೇಶ್ ತಮ್ಮ ಈ ಯಶಸ್ಸಿಗೆ ತಂದೆ- ತಾಯಿ, ಪತಿ, ಅತ್ತೆ- ಮಾವನ, ಬಂಧು-ಬಳಗದವರ ಪ್ರೋತ್ಸಾಹವೇ ಕಾರಣ ಎನ್ನುತ್ತಾರೆ.  ಪುತ್ತೂರಿನ ಈ ಸಂಗೀತ ಸಾಧಕಿಯ ಮುಂದಿನ ಪಯಣಕ್ಕೆ ಶುಭ ಹಾರೈಸೋಣ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

15 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

22 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago