Advertisement
The Rural Mirror ವಾರದ ವಿಶೇಷ

ಪುತ್ತೂರಿನ ಸಂಗೀತ ಸಾಧಕಿ – ಪವಿತ್ರಾ ರೂಪೇಶ್

Share

ಅದು ತೊದಲು ನುಡಿಯಲ್ಲಿ ಮಾತನಾಡುತ್ತಾ ಅಕ್ಷರಗಳನ್ನು ಕಲಿಯುವ ಪ್ರಾಯ. ಆದರೆ ಅದಾಗಲೇ ಸರಸ್ವತಿ ದೇವಿ ಆ ಪುಟ್ಟ
ಹುಡುಗಿಯ ಬಾಯಲ್ಲಿ ತಾಳ-ರಾಗ-ಲಯಬದ್ಧವಾಗಿ ಹಾಡಲು ಆಶೀರ್ವಾದಿಸಿ ಆಗಿತ್ತು.

ತನ್ನ ಮೂರನೇ ವಯಸ್ಸಿನಲ್ಲಿಯೇ ವಿದ್ವಾನ್ ಶ್ರೀ ಮಧೂರ್ ಪಿ. ಬಾಲಸುಬ್ರಹ್ಮಣ್ಯಂ ರಿಂದ ಸಂಗೀತಾಭ್ಯಾಸ ಮಾಡಿ ಕನಕದಾಸ ವಾಧಿರಾಜರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರೇ  ಪವಿತ್ರಾ ರೂಪೇಶ್. ಪುತ್ತೂರಿನ ಪ್ರತಿಷ್ಟಿತ ಉದ್ಯಮಿ ರೂಪೇಶ್ ಸೇಟ್‍ ಅವರ ಧರ್ಮಪತ್ನಿ. ಮಣಿಪಾಲದ ಫಾರ್ಮಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಉಡುಪ ಹಾಗೂ ವಿಜಯಲಕ್ಷ್ಮೀ .ಕೆ. ದಂಪತಿಗಳ ಸುಪುತ್ರಿಯಾಗಿರುವ ಪವಿತ್ರಾರವರಿಗೆ ಸಣ್ಣ ವಯಸ್ಸಿನಿಂದಲೇ ಸಂಗೀತ, ಹಾಡುಗಾರಿಕೆಯಲ್ಲಿ ವಿಶೇಷ ಆಸಕ್ತಿ. ವಿದುಷಿ  ಶುಭಾ ರಾವ್ ಹಾಗು ವಿದುಷಿ  ಶಕುಂತಳಾ ಭಟ್ ಮೊದಲಾದವರಿಂದ ಸಂಗೀತ ಅಭ್ಯಾಸ ಮಾಡಿ, ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರು. 2005ರಲ್ಲಿ ಕರ್ನಾಟಕ ಸರಕಾರ ನಡೆಸಿದ ವಿದ್ವತ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿ
ಸಂಗೀತದಲ್ಲಿ ವಿದುಷಿಯಾದರು. ಇದಲ್ಲದೆ ಸಿ.ಸಿ.ಆರ್,ಟಿ. ವಿದ್ಯಾರ್ಥಿವೇತನವನ್ನು ಏಳು ವರ್ಷ ಪಡೆದುಕೊಂಡ ಗಟ್ಟಿಗಾತಿ ಇವರು.  ತಮ್ಮ ಸ್ವರ ಮಾಧುರ್ಯದಿಂದಾಗಿ ಮಂಗಳೂರು ಆಕಾಶವಾಣಿಯಲ್ಲಿ “ಎ” ಗ್ರೇಡ್ ಕಲಾವಿದರಾಗಿ ಸೇವೆ ಸಲ್ಲಿಸಿದ ಅನುಭವವಿದೆ. 2007ರಲ್ಲಿ ಝೀ ಕನ್ನಡ ವಾಹಿನಿ ಗೃಹಿಣಿಯರಿಗಾಗಿ ನಡೆಸಿದ ಸರಿಗಮಪ ಸೀಸನ್‍ನಲ್ಲಿ ಅಂತಿಮ
ಹಂತದವರೆಗೂ ಪುತ್ತೂರನ್ನು ಪ್ರತಿನಿಧಿಸಿದ ಇವರು ತಮ್ಮ ಮನೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಮಕ್ಕಳಿಗೆ ಸಂಗೀತ ಹಾಗೂ
ಸುಗಮ ಸಂಗೀತ ಹೇಳಿಕೊಡುತ್ತಿದ್ದಾರೆ.

 

ಮಂಗಳೂರು, ಉಡುಪಿ, ಪುತ್ತೂರು, ಬೆಂಗಳೂರು, ಮೈಸೂರು, ಉಡುಪಿ ಶ್ರೀ ಕೃಷ್ಣಮಠ, ಮಂಗಳೂರಿನ ಕರಾವಳಿ ಉತ್ಸವ,
ದೇವಸ್ಥಾನಗಳು ಹಾಗೂ ಬೇರೆ ಬೇರೆ ಪ್ರಸಿದ್ದ ಸ್ಥಳಗಳಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗು ಸುಗಮ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಪವಿತ್ರಾ ರೂಪೇಶ್‍ರವರು ತಮ್ಮ ಊರಾದ ಪುತ್ತೂರಿನಲ್ಲಿ “ಕಾಮಾಕ್ಷಿ ಸಂಗೀತ ಪಾಠಶಾಲೆ” ಯ ಮುಖ್ಯಸ್ಥರಾಗಿದ್ದಾರೆ. ಸದ್ಯ ತಮ್ಮದೇ ಒಂದು ಯೂ ಟ್ಯೂಬ್‌ ಚಾನೆಲ್ 

  ಪ್ರಾರಂಭಿಸಿರುವ ಪವಿತ್ರಾ ರೂಪೇಶ್ ತಮ್ಮ “ಮಿಲೇ ಹೋ ತುಮ್” ಹಿಂದಿ ಆಲ್ಬಮ್ ಹಾಡನ್ನು ಬಿಡುಗಡೆಗೊಳಿಸಿದ್ದಾರೆ. ಶಾಸ್ತ್ರೀಯ ಹಾಗೂ ಫಿಲ್ಮಿ ಮ್ಯೂಸಿಕ್ ಎರಡರಲ್ಲೂ ಸೈ ಎನಿಸಿಕೊಂಡಿರುವ ಪವಿತ್ರಾ ರೂಪೇಶ್ ತಮ್ಮ ಈ ಯಶಸ್ಸಿಗೆ ತಂದೆ- ತಾಯಿ, ಪತಿ, ಅತ್ತೆ- ಮಾವನ, ಬಂಧು-ಬಳಗದವರ ಪ್ರೋತ್ಸಾಹವೇ ಕಾರಣ ಎನ್ನುತ್ತಾರೆ.  ಪುತ್ತೂರಿನ ಈ ಸಂಗೀತ ಸಾಧಕಿಯ ಮುಂದಿನ ಪಯಣಕ್ಕೆ ಶುಭ ಹಾರೈಸೋಣ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

3 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

12 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

12 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

14 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

17 hours ago