Advertisement
The Rural Mirror ವಾರದ ವಿಶೇಷ

ಪುತ್ತೂರಿನ ಸಂಗೀತ ಸಾಧಕಿ – ಪವಿತ್ರಾ ರೂಪೇಶ್

Share

ಅದು ತೊದಲು ನುಡಿಯಲ್ಲಿ ಮಾತನಾಡುತ್ತಾ ಅಕ್ಷರಗಳನ್ನು ಕಲಿಯುವ ಪ್ರಾಯ. ಆದರೆ ಅದಾಗಲೇ ಸರಸ್ವತಿ ದೇವಿ ಆ ಪುಟ್ಟ
ಹುಡುಗಿಯ ಬಾಯಲ್ಲಿ ತಾಳ-ರಾಗ-ಲಯಬದ್ಧವಾಗಿ ಹಾಡಲು ಆಶೀರ್ವಾದಿಸಿ ಆಗಿತ್ತು.

ತನ್ನ ಮೂರನೇ ವಯಸ್ಸಿನಲ್ಲಿಯೇ ವಿದ್ವಾನ್ ಶ್ರೀ ಮಧೂರ್ ಪಿ. ಬಾಲಸುಬ್ರಹ್ಮಣ್ಯಂ ರಿಂದ ಸಂಗೀತಾಭ್ಯಾಸ ಮಾಡಿ ಕನಕದಾಸ ವಾಧಿರಾಜರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದವರೇ  ಪವಿತ್ರಾ ರೂಪೇಶ್. ಪುತ್ತೂರಿನ ಪ್ರತಿಷ್ಟಿತ ಉದ್ಯಮಿ ರೂಪೇಶ್ ಸೇಟ್‍ ಅವರ ಧರ್ಮಪತ್ನಿ. ಮಣಿಪಾಲದ ಫಾರ್ಮಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಎನ್.ಉಡುಪ ಹಾಗೂ ವಿಜಯಲಕ್ಷ್ಮೀ .ಕೆ. ದಂಪತಿಗಳ ಸುಪುತ್ರಿಯಾಗಿರುವ ಪವಿತ್ರಾರವರಿಗೆ ಸಣ್ಣ ವಯಸ್ಸಿನಿಂದಲೇ ಸಂಗೀತ, ಹಾಡುಗಾರಿಕೆಯಲ್ಲಿ ವಿಶೇಷ ಆಸಕ್ತಿ. ವಿದುಷಿ  ಶುಭಾ ರಾವ್ ಹಾಗು ವಿದುಷಿ  ಶಕುಂತಳಾ ಭಟ್ ಮೊದಲಾದವರಿಂದ ಸಂಗೀತ ಅಭ್ಯಾಸ ಮಾಡಿ, ಸಂಗೀತದಲ್ಲಿ ಜ್ಯೂನಿಯರ್ ಹಾಗೂ ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದರು. 2005ರಲ್ಲಿ ಕರ್ನಾಟಕ ಸರಕಾರ ನಡೆಸಿದ ವಿದ್ವತ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ತನ್ನ ಮುಡಿಗೇರಿಸಿ
ಸಂಗೀತದಲ್ಲಿ ವಿದುಷಿಯಾದರು. ಇದಲ್ಲದೆ ಸಿ.ಸಿ.ಆರ್,ಟಿ. ವಿದ್ಯಾರ್ಥಿವೇತನವನ್ನು ಏಳು ವರ್ಷ ಪಡೆದುಕೊಂಡ ಗಟ್ಟಿಗಾತಿ ಇವರು.  ತಮ್ಮ ಸ್ವರ ಮಾಧುರ್ಯದಿಂದಾಗಿ ಮಂಗಳೂರು ಆಕಾಶವಾಣಿಯಲ್ಲಿ “ಎ” ಗ್ರೇಡ್ ಕಲಾವಿದರಾಗಿ ಸೇವೆ ಸಲ್ಲಿಸಿದ ಅನುಭವವಿದೆ. 2007ರಲ್ಲಿ ಝೀ ಕನ್ನಡ ವಾಹಿನಿ ಗೃಹಿಣಿಯರಿಗಾಗಿ ನಡೆಸಿದ ಸರಿಗಮಪ ಸೀಸನ್‍ನಲ್ಲಿ ಅಂತಿಮ
ಹಂತದವರೆಗೂ ಪುತ್ತೂರನ್ನು ಪ್ರತಿನಿಧಿಸಿದ ಇವರು ತಮ್ಮ ಮನೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಮಕ್ಕಳಿಗೆ ಸಂಗೀತ ಹಾಗೂ
ಸುಗಮ ಸಂಗೀತ ಹೇಳಿಕೊಡುತ್ತಿದ್ದಾರೆ.

Advertisement

 

Advertisement

ಮಂಗಳೂರು, ಉಡುಪಿ, ಪುತ್ತೂರು, ಬೆಂಗಳೂರು, ಮೈಸೂರು, ಉಡುಪಿ ಶ್ರೀ ಕೃಷ್ಣಮಠ, ಮಂಗಳೂರಿನ ಕರಾವಳಿ ಉತ್ಸವ,
ದೇವಸ್ಥಾನಗಳು ಹಾಗೂ ಬೇರೆ ಬೇರೆ ಪ್ರಸಿದ್ದ ಸ್ಥಳಗಳಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಗು ಸುಗಮ ಸಂಗೀತ ಕಾರ್ಯಕ್ರಮಗಳನ್ನು ನೀಡಿರುವ ಪವಿತ್ರಾ ರೂಪೇಶ್‍ರವರು ತಮ್ಮ ಊರಾದ ಪುತ್ತೂರಿನಲ್ಲಿ “ಕಾಮಾಕ್ಷಿ ಸಂಗೀತ ಪಾಠಶಾಲೆ” ಯ ಮುಖ್ಯಸ್ಥರಾಗಿದ್ದಾರೆ. ಸದ್ಯ ತಮ್ಮದೇ ಒಂದು ಯೂ ಟ್ಯೂಬ್‌ ಚಾನೆಲ್ 

Advertisement

  ಪ್ರಾರಂಭಿಸಿರುವ ಪವಿತ್ರಾ ರೂಪೇಶ್ ತಮ್ಮ “ಮಿಲೇ ಹೋ ತುಮ್” ಹಿಂದಿ ಆಲ್ಬಮ್ ಹಾಡನ್ನು ಬಿಡುಗಡೆಗೊಳಿಸಿದ್ದಾರೆ. ಶಾಸ್ತ್ರೀಯ ಹಾಗೂ ಫಿಲ್ಮಿ ಮ್ಯೂಸಿಕ್ ಎರಡರಲ್ಲೂ ಸೈ ಎನಿಸಿಕೊಂಡಿರುವ ಪವಿತ್ರಾ ರೂಪೇಶ್ ತಮ್ಮ ಈ ಯಶಸ್ಸಿಗೆ ತಂದೆ- ತಾಯಿ, ಪತಿ, ಅತ್ತೆ- ಮಾವನ, ಬಂಧು-ಬಳಗದವರ ಪ್ರೋತ್ಸಾಹವೇ ಕಾರಣ ಎನ್ನುತ್ತಾರೆ.  ಪುತ್ತೂರಿನ ಈ ಸಂಗೀತ ಸಾಧಕಿಯ ಮುಂದಿನ ಪಯಣಕ್ಕೆ ಶುಭ ಹಾರೈಸೋಣ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

18 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

20 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago