ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ನಟ ಪವನ್ ಕಲ್ಯಾಣ್ ಭೇಟಿ | ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗಿ | ಸ್ವಚ್ಛತೆಗೆ ಸಹಕರಿಸಲು ಭಕ್ತಾದಿಗಳಿಗೆ ಮನವಿ |

March 29, 2022
9:07 PM

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿದರು. ದೇವಾಲಯದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ಸಮರ್ಪಿಸಿ ಪ್ರಾರ್ಥಿಸಿದರು. ಇದೇ ವೇಳೆ ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ , ಸಸಿಯನ್ನು ನೆಟ್ಟರು.

ಇದೇ ವೇಳೆ ದೇವಾಲಯದ  500 ಕ್ಕೂ ಮಿಕ್ಕಿದ ನೌಕರರು  ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ  ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ದೇವಾಲಯದ ಪಾವಿತ್ರತೆ ಹಾಗೂ ಪರಂಪರೆಯನ್ನು ಮುಂದುವರಿಸೋಣ ಎಂದರು.

ವಿಶೇಷವಾಗಿ ದೇವಾಲಯಕ್ಕೆ ಬರುವ ಭಕ್ತಾದಿಗಳಲ್ಲಿ  ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡಲು ಮನವಿ ಮಾಡಿದರು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಎಸೆದು ನಾಗ ಸಂಕುಲಗಳಿಗೆ  ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ
September 2, 2026
2:30 PM
by: ಸಾಯಿಶೇಖರ್ ಕರಿಕಳ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror