ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿದರು. ದೇವಾಲಯದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ಸಮರ್ಪಿಸಿ ಪ್ರಾರ್ಥಿಸಿದರು. ಇದೇ ವೇಳೆ ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ , ಸಸಿಯನ್ನು ನೆಟ್ಟರು.
ಇದೇ ವೇಳೆ ದೇವಾಲಯದ 500 ಕ್ಕೂ ಮಿಕ್ಕಿದ ನೌಕರರು ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ದೇವಾಲಯದ ಪಾವಿತ್ರತೆ ಹಾಗೂ ಪರಂಪರೆಯನ್ನು ಮುಂದುವರಿಸೋಣ ಎಂದರು.
ವಿಶೇಷವಾಗಿ ದೇವಾಲಯಕ್ಕೆ ಬರುವ ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಮನವಿ ಮಾಡಿದರು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಎಸೆದು ನಾಗ ಸಂಕುಲಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…
ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ ಆತಂಕದ ಭವಿಷ್ಯವನ್ನು ಎದುರಿಸುತ್ತಿರುವ…
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…