ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪೇಸಿಎಂ ಅಭಿಯಾನವು ಈಗ ಗ್ರಾಮೀಣ ಭಾಗದಲ್ಲೂ ಸದ್ದು ಮಾಡುತ್ತಿದೆ. ಸುಳ್ಯ ತಾಲೂಕಿನ ಮರ್ಕಂಜ, ದೊಡ್ಡತೋಟ ಸೇರಿದಂತೆ ಅಲ್ಲಲ್ಲಿ ಪೇಸಿಎಂ ಪೋಸ್ಟರ್ ಕಂಡುಬಂದಿದೆ.
‘ಪೇಸಿಎಂ- ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್ ಬುಧವಾರ ಅಭಿಯಾನ ನಡೆಸಿತ್ತು. ಇದು ದೇಶದಾದ್ಯಂತ ಸದ್ದು ಮಾಡಿತ್ತು. ಈಗ ಅದೇ ಅಭಿಯಾನ ಬಿಸಿಯು ಗ್ರಾಮೀಣ ಭಾಗದಲ್ಲೂ ಕಂಡುಬಂದಿದೆ. ಬುಧವಾರ ಅಭಿಯಾನ ಆರಂಭವಾದ ಬಳಿಕ ಇದು ಕರ್ನಾಟಕದ ಹೆಸರು ಕೆಡಿಸುವ ಹುನ್ನಾರ ಇದು ಎಂದು ಮುಖ್ಯಮಂತ್ರಿ ಸಹಿತ ವಿವಿಧ ಬಿಜೆಪಿ ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ನ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿಯು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರಗಳಿದ್ದ ಮಾದರಿ ಸಿದ್ಧಪಡಿಸಿ, ‘ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ’ ಎಂದು ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿತ್ತು.
ಇದೀಗ ಪೇಸಿಎಂ ಕೋಡ್ ಅಧಿಕೃತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಈ ಕೋಡ್ ಬಳಕೆ ಮಾಡಲು ಚಿಂತನೆ ನಡೆಯುತ್ತಿದೆ. ಇದಕ್ಕಾಗಿ ವಿಶೇಷ ಆಪ್ ತೆರೆಯುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…