ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪೇಸಿಎಂ ಅಭಿಯಾನವು ಈಗ ಗ್ರಾಮೀಣ ಭಾಗದಲ್ಲೂ ಸದ್ದು ಮಾಡುತ್ತಿದೆ. ಸುಳ್ಯ ತಾಲೂಕಿನ ಮರ್ಕಂಜ, ದೊಡ್ಡತೋಟ ಸೇರಿದಂತೆ ಅಲ್ಲಲ್ಲಿ ಪೇಸಿಎಂ ಪೋಸ್ಟರ್ ಕಂಡುಬಂದಿದೆ.
‘ಪೇಸಿಎಂ- ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್ ಬುಧವಾರ ಅಭಿಯಾನ ನಡೆಸಿತ್ತು. ಇದು ದೇಶದಾದ್ಯಂತ ಸದ್ದು ಮಾಡಿತ್ತು. ಈಗ ಅದೇ ಅಭಿಯಾನ ಬಿಸಿಯು ಗ್ರಾಮೀಣ ಭಾಗದಲ್ಲೂ ಕಂಡುಬಂದಿದೆ. ಬುಧವಾರ ಅಭಿಯಾನ ಆರಂಭವಾದ ಬಳಿಕ ಇದು ಕರ್ನಾಟಕದ ಹೆಸರು ಕೆಡಿಸುವ ಹುನ್ನಾರ ಇದು ಎಂದು ಮುಖ್ಯಮಂತ್ರಿ ಸಹಿತ ವಿವಿಧ ಬಿಜೆಪಿ ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ನ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿಯು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರಗಳಿದ್ದ ಮಾದರಿ ಸಿದ್ಧಪಡಿಸಿ, ‘ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ’ ಎಂದು ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿತ್ತು.
ಇದೀಗ ಪೇಸಿಎಂ ಕೋಡ್ ಅಧಿಕೃತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಈ ಕೋಡ್ ಬಳಕೆ ಮಾಡಲು ಚಿಂತನೆ ನಡೆಯುತ್ತಿದೆ. ಇದಕ್ಕಾಗಿ ವಿಶೇಷ ಆಪ್ ತೆರೆಯುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…