ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪೇಸಿಎಂ ಅಭಿಯಾನವು ಈಗ ಗ್ರಾಮೀಣ ಭಾಗದಲ್ಲೂ ಸದ್ದು ಮಾಡುತ್ತಿದೆ. ಸುಳ್ಯ ತಾಲೂಕಿನ ಮರ್ಕಂಜ, ದೊಡ್ಡತೋಟ ಸೇರಿದಂತೆ ಅಲ್ಲಲ್ಲಿ ಪೇಸಿಎಂ ಪೋಸ್ಟರ್ ಕಂಡುಬಂದಿದೆ.
‘ಪೇಸಿಎಂ- ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್ ಬುಧವಾರ ಅಭಿಯಾನ ನಡೆಸಿತ್ತು. ಇದು ದೇಶದಾದ್ಯಂತ ಸದ್ದು ಮಾಡಿತ್ತು. ಈಗ ಅದೇ ಅಭಿಯಾನ ಬಿಸಿಯು ಗ್ರಾಮೀಣ ಭಾಗದಲ್ಲೂ ಕಂಡುಬಂದಿದೆ. ಬುಧವಾರ ಅಭಿಯಾನ ಆರಂಭವಾದ ಬಳಿಕ ಇದು ಕರ್ನಾಟಕದ ಹೆಸರು ಕೆಡಿಸುವ ಹುನ್ನಾರ ಇದು ಎಂದು ಮುಖ್ಯಮಂತ್ರಿ ಸಹಿತ ವಿವಿಧ ಬಿಜೆಪಿ ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ನ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿಯು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರಗಳಿದ್ದ ಮಾದರಿ ಸಿದ್ಧಪಡಿಸಿ, ‘ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ’ ಎಂದು ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿತ್ತು.
ಇದೀಗ ಪೇಸಿಎಂ ಕೋಡ್ ಅಧಿಕೃತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಈ ಕೋಡ್ ಬಳಕೆ ಮಾಡಲು ಚಿಂತನೆ ನಡೆಯುತ್ತಿದೆ. ಇದಕ್ಕಾಗಿ ವಿಶೇಷ ಆಪ್ ತೆರೆಯುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…