ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪೇಸಿಎಂ ಅಭಿಯಾನವು ಈಗ ಗ್ರಾಮೀಣ ಭಾಗದಲ್ಲೂ ಸದ್ದು ಮಾಡುತ್ತಿದೆ. ಸುಳ್ಯ ತಾಲೂಕಿನ ಮರ್ಕಂಜ, ದೊಡ್ಡತೋಟ ಸೇರಿದಂತೆ ಅಲ್ಲಲ್ಲಿ ಪೇಸಿಎಂ ಪೋಸ್ಟರ್ ಕಂಡುಬಂದಿದೆ.
‘ಪೇಸಿಎಂ- ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್ ಬುಧವಾರ ಅಭಿಯಾನ ನಡೆಸಿತ್ತು. ಇದು ದೇಶದಾದ್ಯಂತ ಸದ್ದು ಮಾಡಿತ್ತು. ಈಗ ಅದೇ ಅಭಿಯಾನ ಬಿಸಿಯು ಗ್ರಾಮೀಣ ಭಾಗದಲ್ಲೂ ಕಂಡುಬಂದಿದೆ. ಬುಧವಾರ ಅಭಿಯಾನ ಆರಂಭವಾದ ಬಳಿಕ ಇದು ಕರ್ನಾಟಕದ ಹೆಸರು ಕೆಡಿಸುವ ಹುನ್ನಾರ ಇದು ಎಂದು ಮುಖ್ಯಮಂತ್ರಿ ಸಹಿತ ವಿವಿಧ ಬಿಜೆಪಿ ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ನ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿಯು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರಗಳಿದ್ದ ಮಾದರಿ ಸಿದ್ಧಪಡಿಸಿ, ‘ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ’ ಎಂದು ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿತ್ತು.
ಇದೀಗ ಪೇಸಿಎಂ ಕೋಡ್ ಅಧಿಕೃತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಈ ಕೋಡ್ ಬಳಕೆ ಮಾಡಲು ಚಿಂತನೆ ನಡೆಯುತ್ತಿದೆ. ಇದಕ್ಕಾಗಿ ವಿಶೇಷ ಆಪ್ ತೆರೆಯುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…