ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…