ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…