ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…