ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…