ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

September 28, 2024
8:39 PM
ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

ತನ್ನ ಜಮೀನಿನಲ್ಲಿ ಟರ್ಕಿ ದೇಶದ ಸಜ್ಜೆ ಬೆಳೆದು ಉತ್ತಮ ಫಸಲು ಕಾಣುತ್ತಿರುವ ಯಶಸ್ವಿ ರೈತ ಈಗ ಮಾದರಿಯಾಗಿದ್ದಾರೆ. ಯಲಬುರ್ಗಾ ತಾಲೂಕಿನ ಮಾರನಾಳ ಗ್ರಾಮದ ರೈತ ಯೋಗೇಶ್ ಬರವನ್ನೂ ಮೆಟ್ಟಿನಿಂತು ತಮ್ಮ ಜಮೀನಿನಲ್ಲಿ ಪ್ರಯೋಗಾರ್ಥವಾಗಿ ಟರ್ಕಿ ದೇಶದ ಸಜ್ಜೆ ಬೆಳೆದು ಮಾದರಿ ಆಗಿರುವ ರೈತ.…..ಮುಂದೆ ಓದಿ….

ಸಾಮಾನ್ಯವಾಗು ರೈತರು ದೇಶೀಯ ಸಜ್ಜೆಯನ್ನು ನಾಟಿ ಮಾಡುತ್ತಾರೆ.  ಸ್ವದೇಶಿ ತಳಿಯ ಸಜ್ಜೆ ಹಾಕಿದರೆ ಗಿಡ ಮೂರರಿಂದ ನಾಲ್ಕು ಅಡಿ ಬೆಳೆಯುತ್ತದೆ. ಸಜ್ಜೆ ಒಂದು ಗಿಡಕ್ಕೆ ಒಂದು ತೆನೆ ಬರುತ್ತದೆ. ಈ ತೆನೆ ಒಂದರಿಂದ ಒಂದೂವರೆ ಅಡಿ ಮಾತ್ರ ದೊಡ್ಡದಿರುತ್ತದೆ. ಆದರೆ ಟರ್ಕಿ ದೇಶದ ಸಜ್ಜೆಯ ಗಿಡದ ಬಹುಪಾಲು ತೆನೆಯೇ ಇರಲಿದೆ. ಇದರ ಒಂದೊಂದು ತೆನೆಯೂ ಮೂರರಿಂದ ಐದು ಅಡಿ ಎತ್ತರವಿರಲಿದೆ. ಇಷ್ಟು ದೊಡ್ಡ ತೆನೆ ಸಂಪೂರ್ಣವಾಗಿ ಕಾಳುಕಟ್ಟಿದ್ದು, ಎಕರೆಗೆ 13 ರಿಂದ 15 ಕ್ವಿಂಟಲ್ ಇಳುವರಿ ಬರುವ ಸಾಧ್ಯತೆ ಇದೆ.

ಹೊಸ ಪ್ರಯೋಗ ಮಾಡಿರುವ ರೈತ ಯೋಗೇಶ್‌ ಅವರು ಹೇಳುವ ಪ್ರಕಾರ,  ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ. ಟರ್ಕಿ ತಳಿ ರೈತರಿಗೆ ವರದಾನವಾಗಿದೆ ಎನ್ನುತ್ತಾರೆ.

ಯೋಗೇಶ್‌ ಅವರ ಪ್ರಯತ್ನವನ್ನು ವೀಕ್ಷಿಸಿದ ಸ್ಥಳೀಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಇದೇ ಮೊದಲ ಬಾರಿಗೆ ಈ ಮಾದರಿಯ ತಳಿ ನೋಡಿರುವುದು ಎನ್ನುತ್ತಾರೆ ರೈತ ಮರ್ತುಜಾಸಾಬ್.  ಸಜ್ಜೆಯ ಹೊಸ ತಳಿ ಪರಿಚಯವಾಗಿರುವದು ರೈತರಿಗೆ ಅನುಕೂಲವಾಗಿದ್ದು, ಈ ತಳಿಯಿಂದ ಪ್ರತಿ ಎಕರೆಗೆ 10 ರಿಂದ 12 ಕ್ವಿಂಟಾಲ್ ಇಳುವರಿ ಪಡೆಯುವ ನಿರೀಕ್ಷೆ ಇದೆ ಎಂದು  ರೈತ ಕೋಟೇಶ ಹೇಳುತ್ತಾರೆ.…..ಮುಂದೆ ಓದಿ….

ಈ ನಡುವೆ  ಚಿಕ್ಕಜೋಗಿಹಳ್ಳಿ ಸಮೀಪದ ಸಿದ್ದಾಪುರ ಗ್ರಾಮದ ನಾಲ್ವರು ರೈತರು ಕಡಿಮೆ ಮಳೆಗೆ ಬೆಳೆಯುವ ಟರ್ಕಿ ದೇಶದ ಸಜ್ಜೆ ಬೆಳೆದು ಬರಗಾಲಕ್ಕೆ ಸೆಡ್ಡು ಹೊಡೆದಿದ್ದಾರೆ. ರೈತರಾದ ಶೇಖರಪ್ಪ 5 ಎಕರೆ, ಪ್ರದೀಪ್ 2 ಎಕರೆ, ಮನೋಹರ್ 2 ಎಕರೆ, ಮಹಾಂತೇಶ್ ಗೌಡ 2 ಎಕರೆಯಲ್ಲಿ ಟರ್ಕಿ ಸಜ್ಜೆ ಬೆಳೆದು ಯಶಸ್ವಿಯಾಗಿದ್ದಾರೆ.ಮನೋಹರ್ ಅವರು ಈಗಾಗಲೇ 2 ಎಕರೆ ಸಜ್ಜೆ ಬೆಳೆಯನ್ನು ಕಟಾವು ಮಾಡಿದ್ದಾರೆ. ಇನ್ನೂ ಮೂವರು ರೈತರು ಕಟಾವು ಮಾಡುವ ಹಂತದಲ್ಲಿದ್ದಾರೆ. ನಮ್ಮ ಪಾರಂಪರಿಕ ಸಜ್ಜೆ ಬೆಳೆ ಬೆಳೆಯಲು ಕನಿಷ್ಠ ಮೂರು ತಿಂಗಳು ಬೇಕು. ಈ ಟರ್ಕಿ ಸಜ್ಜೆ ಬೆಳೆಯಲು ಮೂರುವರೆ ತಿಂಗಳು ತೆಗೆದುಕೊಳ್ಳುತ್ತದೆ

ಕೃಷಿಯಲ್ಲಿ ಹೊಸಪ್ರಯೋಗ ಮಾಡಿ ಯಶಸ್ಸು ಕಂಡಿರುವ ರೈತ ಯೋಗೇಶ ಈಗ ಇತರ ರೈತರಿಗೂ ಮಾದರಿಯಾಗಿದ್ದಾರೆ. ಕಡಿಮೆ ಜಾಗದಲ್ಲಿ ಹೆಚ್ಚು ಇಳುವರಿ ಪಡೆಯುವ ಇಂತಹ ಪ್ರಯತ್ನಗಳು ಹೆಚ್ಚಾಗಬೇಕಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror