Advertisement
The Rural Mirror ವಾರದ ವಿಶೇಷ

ಕಡಬದಲ್ಲಿ ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ |

Share

ಅಪರೂಪದ ಗುಹಾ ಸಮಾಧಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ.

ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಟಿ. ಮುರುಗೇಶಿಯವರು ಅಧ್ಯಯನ ವರದಿಯ ಬಗ್ಗೆ ತಿಳಿಸಿದ್ದು, ಶಿಲಾಯುಗ ಸಂಸ್ಕೃತಿಯು, ಕರ್ನಾಟಕವೂ ಒಳಗೊಂಡಂತೆ ದಕ್ಷಿಣ ಭಾರತದ ಒಂದು ಪ್ರಮುಖ ಇತಿಹಾಸಪೂರ್ವ ಯುಗದ ಸಂಸ್ಕೃತಿಯಾಗಿದೆ. ಇದು ಸಮಾಧಿ ಪ್ರಧಾನ ಸಂಸ್ಕೃತಿಯಾಗಿದ್ದು, ತನ್ನ ವೈವಿಧ್ಯಮಯ ಸಮಾಧಿಗಳಿಂದಲೇ ಚಿರಪರಿಚಿತವಾಗಿದೆ. ಕರ್ನಾಟಕದ ಪಶ್ಚಿಮ ಕರಾವಳಿ ಮತ್ತು ಕೇರಳದಲ್ಲಿ ಈ ಸಂಸ್ಕೃತಿಗೆ ಸಂಬಂಧಿಸಿದ ವಿಶಿಷ್ಠ ಮಾದರಿಯ ಗುಹಾ ಸಮಾಧಿಗಳನ್ನು ಕೆಂಪು ಮುರಕಲ್ಲಿನಲ್ಲಿ ಅಗೆದು ಮಾಡಲಾಗಿದೆ ಎಂದು ಪ್ರೊ. ಟಿ. ಮುರುಗೇಶಿ ಹೇಳುತ್ತಾರೆ.

ಗುಹಾ ಸಮಾಧಿಗಳು ಎಂದರೆ ಏನು? : ಗುಹಾ ಸಮಾಧಿಗಳು, ಬೃಹತ್ ಶಿಲಾಯುಗ ಕಾಲದಲ್ಲಿ ರಚಿಸಲಾದ ಸಮಾಧಿಗಳು. ಸಮಾಧಿಯ ಮಧ್ಯಭಾಗದಲ್ಲಿ ಸುಮಾರು ಎರಡರಿಂದ ಮೂರು ಅಡಿ ವ್ಯಾಸದ ರಂಧ್ರವನ್ನು ಸುಮಾರು ಒಂದು ಮೀಟರ್ ಆಳದ ವರೆಗೆ ಸಿಲಿಂಡಿರ್ ಆಕಾರದಲ್ಲಿ ಕೆಂಪು ಮುರಕಲ್ಲಿನ ಭೂ ಪಾತಳಿಯಲ್ಲಿ ಕೊರೆಯಲಾಗುತ್ತದೆ. ಇದರ ಕೆಳಭಾಗದಲ್ಲಿ ಅರ್ಧಗೋಳಾಕೃತಿಯ ಗುಹೆಯನ್ನು ಅಗತ್ಯವಾದ ಆಳ ಹಾಗೂ ಸುತ್ತಳತೆಯೊಂದಿಗೆ ಅಗೆದು ರಚಿಸಲಾಗುತ್ತದೆ. ಇದು ಬಹುತೇಕ ಬೌದ್ಧ ಧರ್ಮದ ಸ್ಥೂಪಗಳ ರಚನೆಯನ್ನು ಹೋಲುತ್ತದೆ. ಕರ್ನಾಟಕದ ಕರಾವಳಿಯಲ್ಲಿ ಇಂತಹ ರಚನೆಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಕೇರಳದಲ್ಲಿ, ಗುಹಾ ಸಮಾಧಿಗಳ ಪಾಶ್ರ್ವದಲ್ಲಿ ಒಂದು ಪ್ರವೇಶದ್ವಾರ ಇರುತ್ತದೆ. ಈ ಪ್ರವೇಶದ್ವಾರವನ್ನು ಆಯತಾಕಾರದಲ್ಲಿ ಬಾಗಿಲ ದಾರಂದಂತೆ ರಚಿಸಲಾಗಿರುತ್ತದೆ. ಆದರೆ, ಎರಡೂ ಕಡೆ ಸಮಾಧಿಯ ಮಧ್ಯಭಾಗದಲ್ಲಿ ಎರಡು ಅಥವಾ ಮೂರು ಅಡಿಯ ವ್ಯಾಸದ ರಂಧ್ರ ಸಾಮಾನ್ಯವಾಗಿ ಕಂಡು ಬರುತ್ತದೆ.

ಕಡಬದ ಗುಹಾ ಸಮಾಧಿಯ ವಿಶೇಷತೆ: ಸಾಮಾನ್ಯವಾಗಿ, ಬೃಹತ್ ಶಿಲಾಯುಗದ ಸಮಾಧಿಗಳ ಇರುವನ್ನು ಗುರತಿಸಲು, ಆ ಕಾಲದಲ್ಲಿ ಸಮಾಧಿಯ ಮೇಲೆ ಅಥವಾ ಸಮಾಧಿಯ ಸಮೀಪದಲ್ಲಿ, ದೊಡ್ಡ, ದೊಡ್ಡ ಕಲ್ಲಿನ ಕಂಭಗಳನ್ನು ನಿಲ್ಲಿಸುತ್ತಿದ್ದರು, ಇಲ್ಲವೇ, ಸಮಾಧಿಯ ಮೇಲ್ಭಾಗದಲ್ಲಿ ದೊಡ್ಡ, ದೊಡ್ಡ ಕಾಡು ಕಲ್ಲುಗಳ ಶಿಲಾ ವರ್ತುಲವನ್ನು ರಚಿಸುತ್ತಿದ್ದರು, ಕೆಲವು ಕಡೆ ಸಮಾಧಿಯ ಮೇಲೆ ಕಲ್ಲುಗಳ ರಾಶಿಯನ್ನು ಹೇರಿ, ಕಲ್ಗುಪ್ಪೆಗಳನ್ನು ನಿರ್ಮಿಸಿ ಸಮಾಧಿಗಳ ಇರುವನ್ನು ನಿರ್ದೇಶಿಸಲಾಗಿದೆ.

Advertisement

ಆದರೆ, ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದು ದೊಡ್ಡ ವೃತ್ತವನ್ನು ಕೆಂಪು ಮುರಕಲ್ಲಿನ ಮೇಲೆ ರಚಿಸಿ, ಸಮಾಧಿಯ ಇರುವನ್ನು ಗುರುತಿಸಿರುವುದು ಕಡಬದ ಗುಹಾ ಸಮಾಧಿಯ ವಿಶೇಷತೆಯಾಗಿದೆ. ಆ ವೃತ್ತದ ಕೆಳಭಾಗದಲ್ಲಿ ಆ ವೃತ್ತದ ವಿಸ್ತಾರಕ್ಕೆ ಅನುಗುಣವಾಗಿ ಗುಹೆಯನ್ನು ರಚಿಸಲಾಗಿದೆ. ಆ ವೃತ್ತದ ವಿಸ್ತಾರ ಸುಮಾರು ಏಳು ಅಡಿಯಾಗಿದ್ದು, ಕೆಳಗಿನ ಗುಹೆಯೂ ಏಳು ಅಡಿ ವಿಸ್ತಾರವಾಗಿದೆ. ಕೇರಳ ಮತ್ತು ಕರ್ನಾಟಕದ ಗುಹಾ ಸಮಾಧಿಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ರಂಧ್ರ, ಕಡಬದ ಗುಹಾ ಸಮಾಧಿಯಲ್ಲಿ ಇಲ್ಲ.

ಆದ್ದರಿಂದ, ಕಡಬದ ಸಮಾಧಿ ಒಂದು ಅಪರೂಪ ಹೊಸ ಮಾದರಿಯಾಗಿದೆ. ಗುಹೆಯ ಮಧ್ಯಭಾಗದಲ್ಲಿ ಅಗ್ನಿಕುಂಡವನ್ನು ಹೋಲುವ ಒಂದು ಗುಂಡಿ ಕಂಡು ಬಂದಿದ್ದು, ಇದೂ ಸಹ ಒಂದು ವಿಶೇಷ ಅಂಶವಾಗಿದೆ. ಸಮಾಧಿಯನ್ನು ಪೂರ್ವೋತ್ತರ ದಿಕ್ಕಿಗೆ ಅಭಿಮುಖವಾಗಿ ರಚಿಸಲಾಗಿದೆ. ಗುಹೆಯ ಒಳಭಾಗದಲ್ಲಿ ಅತ್ಯಲ್ಪ ಪ್ರಮಾಣದ ಕೆಂಪು, ಕಪ್ಪು ಮತ್ತು ಕೆಂಪು ಬಣ್ಣದ ಮಡಕೆಯ ಚಿಕ್ಕ, ಚಿಕ್ಕ ಚೂರುಗಳು ಕಂಡು ಬಂದಿವೆ. ಬಹುಶಃ ಸಮಾಧಿಯ ಅವಶೇಷಗಳನ್ನು ನಿಧಿಗಳ್ಳರು ದೋಚಿರುವಂತೆ ಕಂಡು ಬರುತ್ತದೆ ಎಂದು ಪ್ರೊ. ಟಿ. ಮುರುಗೇಶಿ ಅವರು ಹೇಳುತ್ತಾರೆ.

ಈ ಸಮಾಧಿ ಅಧ್ಯಯನದ ಸಂಧರ್ಭ  ಸ್ಥಳೀಯ ಆತಿಥ್ಯವನ್ನು ಒದಗಿಸಿದ ನಿಶ್ಚಿತ್ ಗೋಳಿತಡಿ ಮತ್ತು ಕುಟುಂಬದವರಿಗೆ, ವಾಹನ ಸೌಲಭ್ಯವನ್ನು ಒದಗಿಸಿದ ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್ ನ ಮಾಲೀಕರಾದ ಯೂಸೂಫ್ ಹೈದರ್ ಅವರಿಗೆ ಹಾಗೂ ಈ ಸಮಾಧಿಯನ್ನು ಬೆಳಕಿಗೆ ತರುವಲ್ಲಿ ಬೆವರು ಹರಿಸಿದ  ವಿದ್ಯಾರ್ಥಿಗಳಾದ ಶ್ರೇಯಸ್, ಗೌತಮ್, ಶಾರೀಕ್, ಕಾರ್ತಿಕ್, ವಿಶಾಲ್ ರೈ ಮತ್ತು ದಿಶಾಂತ್ ರವರಿಗೆ ಕೃತಜ್ಞತೆ ಎಂದು ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

11 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

11 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

11 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

12 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

12 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago