ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.
ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…