ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.
ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…