ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.
ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…