#PriceHike | ಬೆಲೆಯೇರಿಕೆಯಿಂದ ತತ್ತರಿಸಿದ ಜನತೆ | ತರಕಾರಿ ಬೆನ್ನಲ್ಲೇ ಗಗನಕ್ಕೇರಿದ ದಿನಸಿ ಸಾಮಗ್ರಿಗಳ ಬೆಲೆ |

July 3, 2023
12:23 PM

ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ #Farmer ಕಂಗಾಲಾಗಿದ್ದಾನೆ. ಮಳೆ ಬಾರದೆ ಇಳುವರಿ ಕೈ ಕೊಟ್ಟಿದೆ. ಇದರಿಂದ ಮಾರುಕಟ್ಟೆಗೆ #Market ಸಮರ್ಪಕವಾಗಿ ತರಕಾರಿ #Vegetables ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮಸೂರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರ ಜೊತೆ ಗ್ರಾಹಕರೂ ಬೆಲೆ ಎರಿಕೆಯಿಂದ ಕಂಗಾಲಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror