ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ #Farmer ಕಂಗಾಲಾಗಿದ್ದಾನೆ. ಮಳೆ ಬಾರದೆ ಇಳುವರಿ ಕೈ ಕೊಟ್ಟಿದೆ. ಇದರಿಂದ ಮಾರುಕಟ್ಟೆಗೆ #Market ಸಮರ್ಪಕವಾಗಿ ತರಕಾರಿ #Vegetables ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮಸೂರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರ ಜೊತೆ ಗ್ರಾಹಕರೂ ಬೆಲೆ ಎರಿಕೆಯಿಂದ ಕಂಗಾಲಾಗಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…