ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ #Farmer ಕಂಗಾಲಾಗಿದ್ದಾನೆ. ಮಳೆ ಬಾರದೆ ಇಳುವರಿ ಕೈ ಕೊಟ್ಟಿದೆ. ಇದರಿಂದ ಮಾರುಕಟ್ಟೆಗೆ #Market ಸಮರ್ಪಕವಾಗಿ ತರಕಾರಿ #Vegetables ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮಸೂರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರ ಜೊತೆ ಗ್ರಾಹಕರೂ ಬೆಲೆ ಎರಿಕೆಯಿಂದ ಕಂಗಾಲಾಗಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…