ಮಳೆ ಸರಿಯಾದ ಸಮಯಕ್ಕೆ ಬಾರದೆ ಕೈಕೊಟ್ಟರೆ, ರೈತನ ಮೇಲೆ ಮಾತ್ರವಲ್ಲ, ರೈತನನ್ನು ನಂಬಿ ಬದುಕುವ ಎಲ್ಲರಿಗೂ ಸಮಸ್ಯೆಯೇ. ರಾಜ್ಯಕ್ಕೆ ಮುಂಗಾರು #Monsoon ಕಾಲಿಟ್ಟಿರೂ, ಅಂದುಕೊಂಡಷ್ಟು ಮಳೆಯಾಗುತ್ತಿಲ್ಲ. ಇದರಿಂದ ರೈತ #Farmer ಕಂಗಾಲಾಗಿದ್ದಾನೆ. ಮಳೆ ಬಾರದೆ ಇಳುವರಿ ಕೈ ಕೊಟ್ಟಿದೆ. ಇದರಿಂದ ಮಾರುಕಟ್ಟೆಗೆ #Market ಸಮರ್ಪಕವಾಗಿ ತರಕಾರಿ #Vegetables ಬಾರದ ಹಿನ್ನೆಲೆ ಬೆಲೆಗಳು ಗಗನಕ್ಕೆ ಏರುತ್ತಿವೆ. ಈಗಾಗಲೆ ತರಕಾರಿ ಬೆಲೆ ದುಪ್ಪಟ್ಟಾಗಿದ್ದು, ಇದರ ಬೆನ್ನಲ್ಲೇ ದಿನಸಿ ಸಾಮಗ್ರಿಗಳ ಬೆಲೆ ಕೂಡ ಏರಿಕೆಯಾಗುತ್ತಿದೆ. ಇದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಈ ವಾರ ದಿನಸಿ ಸಾಮಗ್ರಿಗಳ ಬೆಲೆ 5 ರಿಂದ 10 ರೂಪಾಯಿ ಏರಿಕೆಯಾಗಿದೆ. ಕಳೆದ ವಾರ ಕೆಜಿಗೆ 50 ರೂ ಇದ್ದ ಸ್ಟೀಮ್ ಹಾಗೂ ಸೋನೆ ಮಸೂರಿ ರಾ ರೈಸ್ ಈ ವಾರ 50 ರಿಂದ 60 ರೂ. ಆಗಿದೆ. ಟೊಮೇಟೊ ಬೆಲೆ ದಶಕ ದಾಟಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ತರಕಾರಿ ಬೆಲೆ ಮತ್ತಷ್ಟು ಹೆಚ್ಚಳವಾಗಿದೆ. ಹಾಗೇ ದಿನಸಿ ಸಾಮಗ್ರಿಗಳ ಬೆಲೆಯೂ ಏರಿಕೆಯಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತರ ಜೊತೆ ಗ್ರಾಹಕರೂ ಬೆಲೆ ಎರಿಕೆಯಿಂದ ಕಂಗಾಲಾಗಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…